ದಾವಣಗೆರೆ: ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು, ಸರ್ಕಾರಿ ಶಾಲೆ ಶಿಕ್ಷಕಿ ಹೊನ್ನಾಳಿ ಬಳಿ ತುಂಗಾಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು( ಜ.27) ನಡೆದಿದೆ.ಹಾವೇರಿ ಜಿಲ್ಲೆಯ ತುಮ್ಮಿನಕಟ್ಟೆ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕಿ ಪುಷ್ಪಲತಾ (46) ಆತ್ಮಹತ್ಯೆ ಮಾಡಿಕೊಂಡವರು.
ಹೊನ್ನಾಳಿಯ ರಾಘವೇಂದ್ರ ಮಠದ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನದಿಯಲ್ಲಿ ಇದುವರೆಗೂ ಶವ ಪತ್ತೆಯಾಗಿಲ್ಲ. ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪುಷ್ಪಲತಾ ಅವರ ಪತಿ ಸಹ ಚಸರ್ಕಾರಿ ಶಾಲಾ ಶಿಕ್ಷಕರಾಗಿದ್ದಾರೆ.
ದಂಪತಿ ಹೊಸದಾಗಿ ಹೊನ್ನಾಳಿಯಲ್ಲಿ ಮನೆ ಕಟ್ಟಿಸಿದ್ದರು. ಇದಕ್ಕಾ ಫೈನಾನ್ಸ್ ನಲ್ಲಿ ಸಾಲ ಪಡೆದಿದ್ದರು. ಫೈನಾನ್ಸ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.



