ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಪರಿವರ್ತಕಗಳಿಗೆ ಕೊರತೆ ಇಲ್ಲ. ವಿದ್ಯುತ್ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ 1912 ಕರೆ ಮಾಡಿದರೆ, 72 ಗಂಟೆಗಳೊಳಗೆ ವಿದ್ಯುತ್ ಪರಿವರ್ತಕಗಳ (Transformer) ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ವಿದ್ಯುತ್ ಪರಿವರ್ತಕಗಳ ಬ್ಯಾಂಕ್ ಸ್ಥಾಪನೆ ಮಾಡಿ ದಾಸ್ತಾನು ಮಾಡಲಾಗಿದೆ. ಸಮಸ್ಯೆ ಉಂಟಾದಲ್ಲಿ ಟೋಲ್ ಫ್ರೀ ನಂಬರ್ 1912ಗೆ ಕರೆ ಮಾಡಿದಲ್ಲಿ ಕರೆ ರೆಕಾರ್ಡ್ ಆಗಲಿದೆ.. ರಾಜ್ಯದಲ್ಲಿ ದಿನೇದಿನೆ ವಿದ್ಯುತ್ ಬೇಡಿಕೆ ಹೆಚ್ಚಾಗುತ್ತಿದೆ. ಪ್ರತಿ ದಿನ 17,500 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇದೆ ಎಂದರು.
ಇನ್ನು ವಿದ್ಯುತ್ ಸಮರ್ಪಕ ಪೂರೈಕೆ ಹಿನ್ನೆಲೆಯಲ್ಲಿ ಕುಸುಮ್ ಬಿ ಹಾಗೂ ಕುಸುಮ್ ಸಿ ಯೋಜನೆಯಡಿ ಸೌರ ವಿದ್ಯುತ್ ಉತ್ಪಾದಿಸಲು ಖಾಸಗಿ ಸಹಭಾಗಿತ್ವದಲ್ಲಿ ಸೌರ ವಿದ್ಯುತ್ ಉತ್ಪಾದನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.