Connect with us

Dvgsuddi Kannada | online news portal | Kannada news online

ದಾವಣಗೆರೆ: ಭದ್ರಾ ನಾಲೆಗೆ ಅಕ್ರಮ ಪಂಪ್ ಸೆಟ್ ಹಾವಳಿ; ನೀರಾವರಿ ಇಲಾಖೆಯಿಂದ ತೆರವು ಕಾರ್ಯಾಚರಣೆ

ಹರಿಹರ

ದಾವಣಗೆರೆ: ಭದ್ರಾ ನಾಲೆಗೆ ಅಕ್ರಮ ಪಂಪ್ ಸೆಟ್ ಹಾವಳಿ; ನೀರಾವರಿ ಇಲಾಖೆಯಿಂದ ತೆರವು ಕಾರ್ಯಾಚರಣೆ

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ವ್ಯಾಪ್ತಿಯ ಭದ್ರಾ ನಾಲೆಗೆ ಅಕ್ರಮ ಪಂಪ್ ಸೆಟ್ ಹಾವಳಿ ಹೆಚ್ಚಾಗಿದ್ದು, ಕೊನೆ ಭಾಗಕ್ಕೆ ನೀರು ತಲುಪುವುದು ಕಷ್ಟವಾಗಿದೆ. ಹೀಗಾಗಿ ನಾಲೆಗೆ ಅಳವಡಿಸಿದ್ದ ಅಕ್ರಮ ಪಂಪ್‌ಸೆಟ್‌ಗಳನ್ನು ನೀರಾವರಿ ನಿಗಮದ ಎಂಜಿನಿಯರಗಳು ತೆರವುಗೊಳಿಸಿದರು.

ನಿಗಮದ 3ನೇ ಉಪವಿಭಾಗದ ಕೊಪ್ಪ, ಕೊಮಾರನಹಳ್ಳಿ, ಬಸಾಪುರ, ಬೇವಿನಹಳ್ಳಿ, ಕಾಮಲಾಪುರ ಹಾಗೂ 11 ಎಫ್‌ ನಾಲೆವರೆಗೆ ಅಳವಡಿಸಿದ್ದ ಪಂಪ್‌ಸೆಟ್‌ಗಳನ್ನು ಪೊಲೀಸ್‌ ಭದ್ರತೆಯಲ್ಲಿ ತೆರವುಗೊಳಿಸಲಾಯಿತು. ಮೇಲ್ಭಾಗದಲ್ಲಿ ಅಕ್ರಮ ಪಂಪ್‌ಸೆಟ್‌ಗಳನ್ನು ರಾಜಾರೋಷವಾಗಿ ಹಾಕಿಕೊಂಡಿದ್ದಾರೆ. ನಾಲೆಯ ನೀರಿನ ಹರಿವು ಕಡಿಮೆಯಾಗಿದೆ.‌ ಜಿಲ್ಲಾಡಳಿತ ಪಂಪ್‌ಸೆಟ್‌ ತೆರವು ಮಾಡುವಲ್ಲಿ ತಾರತಮ್ಯ ಮಾಡುತ್ತಿದೆ ಆರೋಪಿಸಿದರು.

ತೆರವಿಗೆ ಬಂದು ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ ಸ್ಥಳೀಯರು, ಕೊನೆ ಭಾಗದ ತೋಟಗಳಿಗೆ ನೀರು ತಲುಪಿಸಬೇಕು ಎಂದು ರೈತರು ಆಗ್ರಹಿಸಿದರು. ಎಇಇ ಕೃಷ್ಣಮೂರ್ತಿ, ಉಪತಹಶೀಲ್ದಾರ್‌ ಆರ್.‌ ರವಿ, ಗ್ರಾಮ ಆಡಳಿತಾಧಿಕಾರಿ ಅಣ್ಣಪ್ಪ, ರಾಮಕೃಷ್ಣ, ಪೊಲೀಸರು, ಬೆಸ್ಕಾಂ ಸಿಬ್ಬಂದಿ ಅದ್ ದ

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

To Top