ಬೆಳಗಾವಿ: ಕೆಲಸದೊತ್ತಡ ಹಾಗೂ ಡ್ಯೂಟಿ ಬದಲಾಯಿಸಿದ್ದಕ್ಕೆ ಮನನೊಂದ ಕೆಎಸ್ಆರ್ಟಿಸಿ ಬೆಳಗಾವಿ ಡಿಪೋ ಮೆಕ್ಯಾನಿಕ್ ಬಸ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಕ್ರಮ ನಿವೇಶನ, ಮನೆಗಳಿಗೆ ಇ-ಖಾತೆ ನೀಡಲು ಕ್ರಮ; ಸಚಿವ ಪ್ರಿಯಾಂಕ್ ಖರ್ಗೆ
ಮೆಕ್ಯಾನಿಕ್ ಕೇಶವ ಕಮಡೊಳ್ಳಿ (57) ಮೃತ ನೌಕರ. ಮೃತ ಕೇಶವ ಕಮಡೊಳ್ಳಿ ಬೆಳಗಾವಿಯ ನಿವಾಸಿಯಾಗಿದ್ದು, ಕೆಎಸ್ಆರ್ಟಿಸಿ ಬಸ್ ವಾಶಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಬೆನ್ನು ನೋವಿದ್ದರೂ ಅಧಿಕಾರಿಗಳು ಪಂಚರ್ ಕೆಲಸಕ್ಕೆ ಬದಲಾಯಿದ್ದರು. ಇದರಿಂದ ಮನನೊಂಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಾವಣಗೆರೆ: ವಿವಿಧ ಕಡೆ ಬೈಕ್ ಕಳ್ಳತನ ಆರೋಪಿ ಬಂಧನ; 4.80 ಲಕ್ಷ ಮೌಲ್ಯದ ಆರು ಯಮಹಾ Rx ಬೈಕ್ ವಶ
ಡ್ಯೂಟಿ ಬದಲಿಸದಂತೆ ಡಿಪೋ ಮ್ಯಾನೇಜರ್ ಲಿಂಗರಾಜ ಲಾಠಿ ಅವರು ಸಹಾಯಕ ಕಾರ್ಯ ಅಧೀಕ್ಷಕ ಅನಿಲ್ ಬಾಂದೇಕರ್ ಅವರಿಗೆ ಮನವಿ ಮಾಡಿದ್ದರು. ಡ್ಯೂಟಿ ಬದಲಿಸಲಾಗಿತ್ತು. ಡ್ಯೂಟಿ ಬದಲಿಸಿದ್ದಕ್ಕೆ ಮತ್ತು ಕೆಲಸದ ಒತ್ತಡ ತಡೆದುಕೊಳ್ಳಲು ಆಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸುದ್ದಿ ತಿಳಿದು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳ ವಿರುದ್ಧ ಮೃತ ಕೇಶವ ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯ ಸಿಗುವವರೆಗೂ ಶವ ತೆಗೆದುಕೊಂಡು ಹೋಗುವುದಿಲ್ಲ ಎಂದು ಕಿಡಿಕಾರಿದ್ದಾರೆ.



