ಬೆಂಗಳೂರು; ರಾಜ್ಯದಲ್ಲಿ ಬಿರು ಬಿಸಿಲು ತಾಪಮಾನಕ್ಕೆ ನೆತ್ತಿ ಸುಡುತ್ತಿದೆ. ಇದರ ಮಧ್ಯೆ ಹವಾಮಾನ ಇಲಾಖೆ ರಾಜ್ಯದ ಜನರಿಗೆ ಸಿಹಿ ಸುದ್ದಿ ನೀಡಿದ್ದು, ಮಾ.22ರಿಂದ 25ರ ವರೆಗೆ ರಾಜ್ಯದ ಕೆಲ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ದಾವಣಗೆರೆ: ಅಡಿಕೆ ಧಾರಣೆ; ಸತತ ಎರಡು ದಿನದಿಂದ ಕುಸಿತ- ಮಾ.19ರ ದರ ಎಷ್ಟಿದೆ..?
ಮಾರ್ಚ್22 ರಿಂದ 23ರ ವರೆಗೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ.
ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಗೆ ಹಕ್ಕುಚ್ಯುತಿ ಎಚ್ಚರಿಕೆ ನೀಡಿದ ಸಭಾಪತಿ ಹೊರಟ್ಟಿ; ಕಾರಣ ಏನು..?
ಮಾ.24, 25ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಇನ್ನು ಗುರುವಾರ ಹಾಗೂ ಶುಕ್ರವಾರ 30-40 ಕಿಮೀ ವೇಗದ ಗಾಳಿಯು ಒಳನಾಡಿನಲ್ಲಿ ಬೀಸಲಿದೆ. ರಾಜ್ಯದ ಕಲಬುರಗಿಯಲ್ಲಿ ಗರಿಷ್ಠ 40.6 ಡಿ.ಸೆ ತಾಪಮಾನ ದಾಖಲಾಗಿದೆ.



