ದಾವಣಗೆರೆ: ಪೊಲೀಸ್ ಹೆಡ್ ಕಾನ್ ಸ್ಟೇಬಲೊಬ್ಬರ ಮನೆಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದು, 4.8 ಲಕ್ಷ ರೂಪಾಯಿ ಮೌಲ್ಯದ ಚಿನ್ನ, 50 ಸಾವಿರ ನಗದು ದೋಚಿ ಪರಾರಿಯಾದ ಘಟನೆ ಹರಿಹರ ಪಟ್ಟಣದ ವಿದ್ಯಾನಗರದಲ್ಲಿ ನಡೆದಿದೆ.
ದಾವಣಗೆರೆ: ಕಾರು- ಬಸ್ ನಡುವೆ ಅಪಘಾತ; ಮೂವರು ಸಾವು- ಇಬ್ಬರಿಗೆ ಗಂಭೀರ ಗಾಯ
ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಜಯನಾಯ್ಕ ಅವರ ನಿವಾಸದಲ್ಲಿ 4.8 ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಒಡವೆ, 50 ಸಾವಿರ ರೂಪಾಯಿ ನಗದು ಕಳ್ಳತನವಾಗಿದೆ. ಚಿನ್ನದ ಚೈನ್ ಸರ, ಉಂಗುರ, ಬ್ರಾಸ್ ಲೇಟ್, ಕಿವಿಓಲೆ ಸೇರಿದಂತೆ ಒಟ್ಟು 60.5 ಗ್ರಾಂ ಚಿನ್ನ, 50 ಸಾವಿರ ರೂಪಾಯಿ ನಗದು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.
ದಾವಣಗೆರೆ: ಅಡಿಕೆಗೆ ಭರ್ಜರಿ ಬೆಲೆ; 55 ಸಾವಿರ ಗಡಿಯತ್ತ ದರ; ಏ.4ರ ಕನಿಷ್ಠ, ಗರಿಷ್ಠ ರೇಟ್ ಎಷ್ಟಿದೆ..?
ಬಡಾವಣೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯನಾಯ್ಕ, ಯುಗಾದಿ ಹಬ್ಬಕ್ಕೆ ಕುಟುಂಬದ ಸದಸ್ಯರೊಂದಿಗೆ ಮಾರ್ಚ್ 29ರಂದು ಊರಿಗೆ ಹೋಗಿದ್ದರು. ಜಯನಾಯ್ಕ ಅವರು ಮನೆಗೆ ಬೀಗ ಹಾಕಿ ನೈಟ್ ಡ್ಯೂಟಿಗೆ ಹೋಗಿದ್ದರು. ಬೆಳಿಗ್ಗೆ 9.30ರ ವೇಳೆಗೆ ಮನೆಗೆ ಬಂದಾಗ ಗೇಟ್ ಹಾಗೂ ಬಾಗಿಲಿನ ಇಂಟರ್ ಲಾಕ್ ಮುರಿದು ಕಳ್ಳತನ ಮಾಡಿದ್ದಾರೆ. ಈ ಕುರಿತು ಹರಿಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



