ದಾವಣಗೆರೆ: ಅನಾರೋಗ್ಯದಿಂದ ಮೃತಪಟ್ಟ ಪತ್ನಿ ಸಾವಿನಿಂದ ತೀವ್ರವಾಗಿ ಮನನೊಂದಿದ್ದ ಪತಿ, ತನ್ನಿಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ದಾವಣಗೆರೆಯ ಎಸ್ಪಿಎಸ್ ನಗರದಲ್ಲಿ ನಡೆದಿದೆ.
ದಾವಣಗೆರೆ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಹೊತ್ತಿ ಉರಿದ ಕಾರು
ಉದಯ್(35) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದು, ಮಕ್ಕಳಾದ ಸಿಂಧುಶ್ರೀ(4), ಶ್ರೀಜಯ್(3)ನನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇತ್ತೀಚೆಗೆ ಅಷ್ಟೇ ಉದಯ್ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪತ್ನಿ ಸಾವಿನ ಬಳಿಕ ಖಿನ್ನತೆಗೆ (Depressed) ಒಳಗಾಗಿದ್ದ ಪತಿ ಉದಯ್ , ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.ನೇಣಿಗೆ ಶರಣಾಗುವುದಕ್ಕೂ ಮುನ್ನ ಗೋಡೆ ಮೇಲೆ ರಕ್ತದಲ್ಲಿ ಐಲವ್ ಯು ಹೇಮಾ ಎಂದು ಪತ್ನಿಯ ಹೆಸರು ಬರೆದಿದ್ದಾರೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಚಳಗೆರೆ ನಿವಾಸಿ ಹೇಮಾ ಹಾಗೂ ಉದಯ್ ಪರಸ್ಪರ ಪ್ರೀತಿಸಿ ಮದ್ವೆ ಆಗಿದ್ದರು. ಆದ್ರೆ, ಕಳೆದ ಎಂಟು ತಿಂಗಳ ಹಿಂದೆ ಪತ್ನಿ ಹೇಮಾ ಹೃದಯಾಘಾತದಿಂದ ಸಾವನ್ನಪ್ಪಿದ್ದಳು. ಪ್ರೀತಿಯ ಪತ್ನಿ ಸಾವಿನಿಂದ ಉದಯ್ ತೀವ್ರ ನೋವಿನಲ್ಲಿದ್ದನು. ಕೊನೆಗೆ ನೋವು ಕಡೆದುಕೊಳ್ಳಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇಡೀ ಕುಟುಂಬವೇ ದುರಂತ ಅಂತ್ಯವಾದಂತಾಗಿದೆ. ಮಕ್ಕಳನ್ನ ಉಸಿರು ಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು, ಶ್ವಾನ ದಳ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞ ಪರಿಶೀಲನೆ ನಡೆಸಿದ್ದಾರೆ.