ದಾವಣಗೆರೆ: ವಕ್ಫ್ ಬಿಲ್ ರದ್ದತಿ; ಪ್ರಚೋದನಾತ್ಮಕ ಹೇಳಿಕೆ ವಿಡಿಯೋ ಹರಿಬಿಟ್ಟ ಕಾಂಗ್ರೆಸ್ ಮುಖಂಡ ರಾಜಾಸ್ಥಾನದಲ್ಲಿ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ವಕ್ಫ್ ಬಿಲ್ ರದ್ದತಿ ಬಗ್ಗೆ ಸಮುದಾಯದ‌ ಜನರಿಗೆ ಪ್ರಚೋದನಾತ್ಮಕ ಹೇಳಿಕೆ ವಿಡಿಯೋ ಮಾಡಿ, ಹರಿಬಿಟ್ಟ ಕಾಂಗ್ರೆಸ್ ಮುಖಂಡನನ್ನು ಪೊಲೀಸರು ರಾಜಾಸ್ಥಾನದಲ್ಲಿ ಬಂಧನ ಮಾಡಿದ್ದಾರೆ.

ಇತ್ತೀಚಿಗೆ ದಾವಣಗೆರೆ ನಗರದಲ್ಲಿ ವಕ್ಫ್ ಮಸೂದೆ -2025 ಬಿಲ್ ವಿರುದ್ಧ ಪ್ರಚೋದನಾತ್ಮಕವಾಗಿ ಮಾತನಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಈ ವಿಡಿಯೋ ಆಧರಿಸಿ ಪಾಲಿಕೆ ಮಾಜಿ ಸದಸ್ಯ ಆಹಮ್ಮದ್ ಕಬೀರ್ ಖಾನ್ ಮತ್ತು ಇತರ ವಿರುದ್ಧ ಆಜಾದ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಲಾಗಿತ್ತು.

ಈ ಪ್ರರಕಣದ ಎ1 ಆರೋಪಿತನು ಪ್ರಕರಣ ದಾಖಲಾದ ನಂತರ ತಲೆಮೆರೆಸಿಕೊಂಡಿದ್ದು, ಆರೋಪಿತನ ಪತ್ತೆ ಕಾರ್ಯಕ್ಕೆ ಪೊಲೀಸ್ ಅಧೀಕ್ಷಕ ಉಮಾ ಪ್ರಶಾಂತ್, ಎಎಸ್ಪಿ ವಿಜಯಕುಮಾರ ಎಂ ಸಂತೋಷ್ & ಜಿ ಮಂಜುನಾಥ, ಡಿವೈಎಸ್ಪಿ ಶರಣ ಬಸವೇಶ್ವರ ಬಿ ರವರ ಮಾರ್ಗದರ್ಶನದಲ್ಲಿ ಆಜಾದ್ ನಗರ ಪೊಲೀಸ್ ನಿರೀಕ್ಷಕ ಅಶ್ವಿನ್ ಕುಮಾರ ಹಾಗೂ ಅಧಿಕಾರಿ ಸಿಬ್ಬಂದಿಗಳ ತಂಡ ರಚಿಸಲಾಗಿತ್ತು. ಈ ತಂಡ ಎ1 ಆರೋಪಿ ಅಹಮ್ಮದ್ ಕಬೀರ್ ಖಾನ್ (32)ವರ್ಷ, ವಾಸ: ಆಹ್ಮದ್ ನಗರ, ದಾವಣಗೆರೆ ಈತನನ್ನು ರಾಜಾಸ್ಥಾನ್ ರಾಜ್ಯದ ಅಜ್ಮೀರ್ ದಲ್ಲಿ ಬಂದಿಸಲಾಗಿರುತ್ತದೆ.ಆರೋಪಿತನನ್ನು ಹಾಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ. ಈ ಪ್ರಕರಣದ ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾದ ತಂಡವನ್ನು ಎಸ್ಪಿ ಉಮಾ ಪ್ರಶಾಂತ್ ಪ್ರಶಂಸಿದ್ದಾರೆ.

ಸಾರ್ವಜನಿಕರ ಗಮನಕ್ಕೆ: ದಾವಣಗೆರೆ ಜಿಲ್ಲೆಯ ಸಾರ್ವಜನಿಕರು ವಾಟ್ಸ್ಆಪ್, ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟ್ಟರ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಕಾರಿ, ವ್ಯಕ್ತಿ ನಿಂದನೆ, ಧಾರ್ಮಿಕ ನಿಂದನೆ, ದ್ವೇಷ ಭಾಷಣ, ದೇಶ ವಿರೋಧಿ ಪೋಸ್ಟ್ಗಳು ವಿಶೇಷವಾಗಿ ವಕ್ಷ್ ಬಿಲ್ ಸಂಬಂಧಿಸಿದಂತೆ ಹಾಗೂ ಇತ್ಯಾದಿ ಅಕ್ಷೇಪರ್ಹ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು ಮತ್ತು ಶೇರ್ ಮಾಡುವುದು, ಕೆಟ್ಟದಾಗಿ ಕಾಮೇಂಟ್ ಮಾಡುವುದು ಕಾನೂನಿಗೆ ಬಾಹಿರವಾಗಿದ್ದು, ಅಂತ ಪೋಸ್ಟ್ಗಳನ್ನು ಮಾಡುವಂತಹ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲಾತಾಣಗಳ ಬಳಕೆಯಲ್ಲಿ ಎಚ್ಚರ ಎಂದು ಈ ಮೂಲಕ ಜಿಲ್ಲಾ ಪೊಲೀಸ್ ಅಧೀಕ್ಷಕಕರು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *