ವಯೋಮಿತಿ ಸಡಿಲಿಕೆ: 5 ವರ್ಷ 5 ತಿಂಗಳು ತುಂಬಿದ್ರೆ ಸಾಕು 1ನೇ ತರಗತಿಗೆ ದಾಖಲಾತಿಗೆ ಅವಕಾಶ..!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಒಂದನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯವೆಂಬ ನಿಯಮಕ್ಕೆ ಸಡಿಲಿಕೆ ನೀಡಲಾಗಿದೆ. ಒಂದು ವರ್ಷದ ಮಟ್ಟಿಗೆ ಮಾತ್ರ ನಿಯಮ ಸಡಿಲ ಮಾಡಿದ್ದು, ಪೋಷಕರಿಗೆ ದೊಡ್ಡ ಆತಂಕ ದೂರವಾಗಿದೆ. 1ನೇ ತರಗತಿಗೆ ಮಕ್ಕಳ ದಾಖಲಾತಿಗೆ ವಯೋಮಿತಿ 5 ವರ್ಷ 5 ತಿಂಗಳು ತುಂಬಿದ್ರೆ ಸಾಕು, ಈ ವರ್ಷ  ದಾಖಲಾತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ‌(Madhu Bangarappa) ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 1ನೇ ತರಗತಿಗೆ ಮಕ್ಕಳನ್ನು ಸೇರಿಸುವ ವಯೋಮಿತಿಯನ್ನು ಸಡಿಲಿಕೆ ಮಾಡಲಾಗಿದೆ. ಈ ಮೂಲಕ ಪೋಷಕರು ವಯೋಮಿತಿ ಬಗ್ಗೆ ಹೊಂದಿದ್ದಂತ ಗೊಂದಲಕ್ಕೆ ತೆರೆ ಎಳೆಯಲಾಗಿದೆ ಎಂದರು.

ಅಸಮರ್ಥ ‌7 ಲಿಂಗಾಯತ ಸಚಿವರು ಕೂಡಲೇ ರಾಜೀನಾಮೆ ನೀಡಲಿ: ಚನ್ನಗಿರಿ ಕಾಂಗ್ರೆಸ್ ಶಾಸಕ ಕಿಡಿ

ದೇಶಾದ್ಯಂತ 1ನೇ ತರಗತಿಗೆ ಮಕ್ಕಳ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮವಿದೆ. ಆದರೆ, ಈ ವರ್ಷ ಮಾತ್ರ ಕರ್ನಾಟಕದಲ್ಲಿ ವಯಸ್ಸಿನ ಮಿತಿಯನ್ನು ಸಡಿಲಿಕೆ ಮಾಡಲಾಗುತ್ತಿದೆ. ಈ ವರ್ಷ ಮಾತ್ರ 5 ವರ್ಷ 5 ತಿಂಗಳು ತುಂಬಿದ ಮಕ್ಕಳನ್ನು 1ನೇ ತರಗತಿಗೆ ದಾಖಲಾತಿ ಮಾಡಬಹುದು ಎಂಬುದಾಗಿ ತಿಳಿಸಿದರು.

ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ ಇದು ಈ ವರ್ಷಕ್ಕೆ ಮಾತ್ರ ಅನ್ವಯವಾಗಲಿದೆ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಮುಂದಿನ ವರ್ಷದಿಂದ 1ನೇ ತರಗತಿಗೆ ದಾಖಲಾತಿಯಲ್ಲಿ ಯಾವುದೇ ಬದಲಾವಣೆಯಿಲ್ಲ. ದೇಶದಲ್ಲಿ ಇರುವಂತೆಯೇ 1ನೇ ತರಗತಿಗೆ ಶಾಲಾ ಮಕ್ಕಳ ದಾಖಲಾತಿಗೆ 6 ವರ್ಷ ಕಡ್ಡಾಯವೆಂಬ ನಿಯಮ ಜಾರಿಯಲ್ಲಿ ಇರಲಿದೆ ಎಂದರು.

ಕರ್ನಾಟಕದಲ್ಲಿ 1ನೇ ತರಗತಿಗೆ ಮಕ್ಕಳ ದಾಖಲಾತಿಯ ವಯಸ್ಸಿನ ಮಿತಿಯ ಸಂಬಂಧ ಎನ್ ಇ ಪಿ ಅವರಿಂದ ವರದಿ ಕೇಳಲಾಗಿತ್ತು. ಎನ್ ಇ ಪಿ ಸೂಚನೆ ಮೇರೆಗೆ ಈ ವರ್ಷ ಮಾತ್ರ 1ನೇ ತರಗತಿ ದಾಖಲಾತಿಗೆ 5 ವರ್ಷ 5 ತಿಂಗಳ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ ಎಂಬುದಾಗಿ ತಿಳಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *