ಬೆಂಗಳೂರು: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಂನಲ್ಲಿ ಗುರುತಿಸಿಕೊಂಡಿದ್ದ ದಾವಣಗೆರೆ ಜಿಲ್ಲೆಯ ಬಿಜೆಪಿ ಇಬ್ವರು ಪ್ರಮುಖ ನಾಯಕರು, ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಮೂಲಕ ಬಿಜೆಪಿ ತೊರೆದು, ಕೈ ಪಡೆ ಸೇರಲು ಮುಂದಾದ್ರಾ.? ಎಂಬ ಪ್ರಶ್ನೆ ಮೂಡಿದೆ. ಇದು ದಾವಣಗೆರೆ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಠಿಸಿದೆ.
ಕೇಂದ್ರ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್ ಹಾಗೂ ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಯತ್ನಾಳ್ ಬಣದಲ್ಲೇ ಗುರುತಿಸಿಕೊಂಡಿದ್ದ ಈ ಇಬ್ಬರೂ ನಾಯಕರು ಒಟ್ಟಿಗೆ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಭೇಟಿ ವೇಳೆ ರಾಜಕೀಯ ಸಮಾಲೋಚನೆ ನಡೆಸಿದರು ಎಂದು ಡಿಕೆ ಶಿವಕುಮಾರ್ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರ ಹಾಕಿದ್ದ ಯತ್ನಾಳ್ ಅವರ ಉಚ್ಛಾಟನೆ ಬಳಿಕ ಕಾಂಗ್ರೆಸ್ ಸೇರಲಿದ್ದಾರೆ ಎಂದು ಸುದ್ದಿಯಾಗಿತ್ತು. ಇದೀಗ ಅದೇ ಬಣದಲ್ಲಿ ಗುರುತುಸಿಕೊಡಿದ್ದ ಈ ಇಬ್ಬರು ನಾಯಕರು ಡಿಸಿಎಂ ಭೇಟಿಯಾಗಿದ್ದು ಸಂಚಲನ ಸೃಷ್ಟಿಸಿದೆ. ಇತ್ತೀಚೆಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷ ಬಿಜೆಪಿಯಿಂದ ಉಚ್ಛಾಟಿಸಿತ್ತು.



