Connect with us

Dvgsuddi Kannada | online news portal | Kannada news online

ದಾವಣಗೆರೆ: ಗಣಿ ಸಚಿವರ ತವರು ಜಿಲ್ಲೆಯಲ್ಲಿಯೇ ಅಕ್ರಮ ಗಣಿಗಾರಿಕೆ; ಉಪ ಲೋಕಾಯುಕ್ತ ಅನಿರೀಕ್ಷಿತ ಭೇಟಿ; ಸ್ವಯಂಪ್ರೇರಿತ ದೂರು ದಾಖಲು

davangere lokayukta visit 1

ದಾವಣಗೆರೆ

ದಾವಣಗೆರೆ: ಗಣಿ ಸಚಿವರ ತವರು ಜಿಲ್ಲೆಯಲ್ಲಿಯೇ ಅಕ್ರಮ ಗಣಿಗಾರಿಕೆ; ಉಪ ಲೋಕಾಯುಕ್ತ ಅನಿರೀಕ್ಷಿತ ಭೇಟಿ; ಸ್ವಯಂಪ್ರೇರಿತ ದೂರು ದಾಖಲು

ದಾವಣಗೆರೆ: ರಾಜ್ಯದ ತೋಟಗಾರಿಕೆ ಮತ್ತು ಗಣಿ ಸಚಿವ ಎಸ್.ಎಸ್ . ಮಲ್ಲಿಕಾರ್ಜುನ ತವರು ಜಿಲ್ಲೆ ದಾವಣಗೆರೆಯಲ್ಲಿಯೇ ಅಕ್ರಮ ಗಣಿಗಾರಿಕೆ (Illegal mining) ನಡೆಯುತ್ತಿರುವುದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.ವೀರಪ್ಪ ಅನಿರೀಕ್ಷಿತ ಭೇಟಿ ವೇಳೆ ಪತ್ತೆಯಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆ ನಿಯಮಬದ್ಧವಾಗಿಲ್ಲ ಎಂಬ ಅನುಮಾನಗಳು ಬರುತ್ತಿದ್ದು ಕಾನೂನುಬಾಹಿರವಾಗಿ ಗಣಿಗಾರಿಕೆ ನಡೆಯುತ್ತಿರುವ ಶಂಕೆ ಇರುವುದರಿಂದ ಲೋಕಾಯುಕ್ತದಲ್ಲಿ ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿ ತನಿಖೆ ಕೈಗೊಳ್ಳಬೇಕಯ ಎಂದು ಸೂಷನೆ ನೀಡಿದರು.

ದಾವಣಗೆರೆ ತಾಲ್ಲೂಕಿನ ಕುರ್ಕಿ ಬಳಿಯ ಹಿರೇತೊಗಲೇರಿ ಮತ್ತು ಹೆಬ್ಬಾಳ ಬಳಿಯ ಪಂಜೇನಹಳ್ಳಿ ಅರಣ್ಯದಂಚಿನಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆ ವೀಕ್ಷಣೆ ಮಾಡಿದರು. ಕುರ್ಕಿ ಬಳಿ ಪಟ್ಟಾ ಭೂಮಿಯಲ್ಲಿ ಗಣಿಗಾರಿಕೆ ನಡೆಸಲಾಗುತ್ತಿದ್ದು, ಇಲ್ಲಿ 7ಕಂಪನಿಗೆ ಅನುಮತಿ ನೀಡಲಾದ ಪ್ರದೇಶಕ್ಕಿಂತಲೂ ಹೆಚ್ಚು ಒತ್ತುವರಿ ಮಾಡಿಕೊಳ್ಳಲಾಗಿದೆ. ಬಫರ್ ಝೋನ್ ಬಿಟ್ಟು ಗಣಿಗಾರಿಕೆ ಮಾಡಬೇಕು. ಸಾಗಾಣಿಕೆಗೂ ಸ್ಥಳವನ್ನು ಅನುಮತಿಸಲಾದ ಪ್ರದೇಶಲ್ಲಿಯೇ ಬಿಟ್ಟುಕೊಂಡಿರಬೇಕು. ಆದರೆ ಗಡಿಭಾಗಕ್ಕಿಂತಲೂ ಹೆಚ್ಚುವರಿಯಾಗಿ ಒತ್ತುವರಿಯಾಗಿರುವುದು ಕಂಡು ಬಂದಿರುತ್ತದೆ. ಬಫರ್ ಝೋನ್ ಇಲ್ಲದೇ ಸಾಕಷ್ಟು ಆಳವಾಗಿ ಗಣಿಗಾರಿಕೆ ಮಾಡುವುದರಿಂದ ಮತ್ತು ನಿಯಮದನ್ವಯ ಇದಕ್ಕೆ ಯಾವುದೇ ಮಿತಿ ಇಲ್ಲದಿರುವುದರಿಂದ ಪಕ್ಕದಲ್ಲಿನ ಭೂಮಿಯು ಕುಸಿಯುತ್ತದೆ.

ಇದರಿಂದ ಸಾಕಷ್ಟು ಪ್ರಕೃತಿಗೆ ತುಂಬಲಾಗದ ನಷ್ಟವಾಗಲಿದೆ. ಇಲಾಖೆ ಅಧಿಕಾರಿಗಳು ಕಾಲ, ಕಾಲಕ್ಕೆ ಗಣಿಗಾರಿಕೆಯನ್ನು ನಿಯಮವಾಗಿ ನಡೆಸಲಾಗುತ್ತಿದೆಯೇ, ನಿಯಮಬಾಹಿರವಾಗಿ ನಡೆಸಲಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು. ಹಿರೇತೊಗಲೇರಿಯಲ್ಲಿ 7 ಕಲ್ಲುಗಣಿಗಾರಿಕೆಗೆ ಅನುಮತಿ ನೀಡಲಾಗಿದೆ. ಕೆಲವು ಕಡೆ 100 ಅಡಿಗಿಂತಲೂ ಹೆಚ್ಚಿನ ಆಳದವರೆಗೆ ಕಲ್ಲುಗಣಿಗಾರಿಕೆ ಮಾಡಲಾಗಿದೆ. ಆದರೆ ಇಷ್ಟು ಆಳದವರೆಗೆ ಗಣಿಗಾರಿಕೆ ಮಾಡಿದಲ್ಲಿ ಮುಂದೆ ಮುಚ್ಚುವುದು ಹೇಗೆ ಎಂಬುದನ್ನು ಅಧಿಕಾರಿಗಳು ಮನಗಾಣಬೇಕಾಗಿದೆ ಎಂದರು.

ಕ್ವಾರಿಯಲ್ಲಿ ಬ್ಲಾಸ್ಟಿಂಗ್

ಕ್ವಾರಿಯಲ್ಲಿ ಬ್ಲಾಸ್ಟಿಂಗ್ ಕೂಡ ಮಾಡಲಾಗುತ್ತಿದೆ, ಆದರೆ ಇದರಿಂದ ಸುತ್ತಮುತ್ತಲಿನ ಗ್ರಾಮದಲ್ಲಿನ ಮನೆಗಳಿಗೆ ಹಾನಿಯಾಗುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಹಿಂದೆ ಬ್ಲಾಸ್ಟಿಂಗ್ ಮಾಡಬಾರದೆಂದು ಷರತ್ತು ಇರುತ್ತಿತ್ತು. ಉಳಿಯಿಂದ ಕಲ್ಲು ತೆಗೆದಿರುವ ಯಾವುದೇ ಗುರುತು ಇಲ್ಲಿ ಕಾಣುವುದಿಲ್ಲ. ಸಂಪೂರ್ಣವಾಗಿ ಬ್ಲಾಸ್ಟಿಂಗ್ ಮಾಡಲಾಗುತ್ತಿದೆ. ಯಾವುದೇ ತೊಂದರೆಯಾದಲ್ಲಿ ಯಾರು ಜವಾಬ್ದಾರರು, ಇದನ್ನು ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸಹ ಪರಿಶೀಲನೆ ನಡೆಸಬೇಕು ಎಂದರು.

ಗಣಿಗಾರಿಕೆ ನಿಯಮಬದ್ದವಾಗಿ ನಡೆಸಿ

ಗಣಿಗಾರಿಕೆಯನ್ನು ಸರ್ಕಾರದ ನಿಯಮಾನುಸಾರವಾಗಿ ನಡೆಸಲು ಯಾವುದೇ ಅಭ್ಯಂತರವಿಲ್ಲ. ಆದರೆ ನಿಯಮಬಾಹಿರವಾಗಿ ಷರತ್ತುಗಳನ್ನು ಉಲ್ಲಂಘಿಸಿ ಮಾಡಿದಲ್ಲಿ ಕಠಿಣಕ್ರಮ ಅನಿವಾರ್ಯವಾಗುತ್ತದೆ. ಇದನ್ನು ಅಧಿಕಾರಿಗಳು ತಡೆಯಬೇಕು, ಅಂತಹ ಗಣಿಗಾರಿಕೆಗೆ ನೀಡಿದ ಗುತ್ತಿಗೆ ರದ್ದುಪಡಿಸಬೇಕೆಂದು ಸೂಚನೆ ನೀಡಿದರು.

ಹೆಬ್ಬಾಳ ಬಳಿ ಪಂಜೇನಹಳ್ಳಿಗೆ ಭೇಟಿ

ಹೆಬ್ಬಾಳ ಬಳಿಯ ಪಂಜೇನಹಳ್ಳಿಗೆ ಭೇಟಿ ನೀಡಿ ಅಲ್ಲಿ ಅರಣ್ಯದಂಚಿನಲ್ಲಿ ನಡೆಯುತ್ತಿದ್ದ ಗಣಿಗಾರಿಕೆ ವೀಕ್ಷಣೆ ಮಾಡಿದರು. ಇಲ್ಲಿ ಕ್ವಾರಿಯನ್ನು ನಿಲ್ಲಿಸಲಾಗಿದ್ದು ಕ್ರಷರ್ ಮಾತ್ರ ನಡೆಯುತ್ತಿದೆ. ಆದರೆ ಗಣಿಗಾರಿಕೆ ನಡೆಸಿದ ಸ್ಥಳವನ್ನು ಮಣ್ಣಿನಿಂದ ಮುಚ್ಚಿ ಗಿಡ, ಮರಗಳನ್ನು ಹಾಕಬೇಕಾಗಿದೆ. ಗಣಿಗಾರಿಕೆ ಮಾಡುವಾಗ ಆಳದವರೆಗೆ ತೆಗೆದಿರುವುದನ್ನು ಪುನರ್ ನಿರ್ಮಾಣ ಮಾಡಬೇಕೆಂಬ ಷರತ್ತು ಇರುತ್ತದೆ. ಆದರೆ ಅಧಿಕಾರಿಗಳು ತಮ್ಮ ಕೆಲಸ ಮಾಡುವುದಿಲ್ಲ, ಬೇರೆ ಕಡೆಗೆ ಅಧಿಕಾರಿಗಳ ವರ್ಗಾವಣೆಯಾಗಿ ಹೋಗುತ್ತಾರೆ ಎಂದು ತಿಳಿಸಿ ಕಡ್ಡಾಯವಾಗಿ ಮೈನಿಂಗ್ ಮಾಲೀಕರಿಂದ ಈ ಕೆಲಸ ಮಾಡಿಸಬೇಕೆಂದು ಸೂಚನೆ ನೀಡಿದರು.

ಎಲ್ಲೆಲ್ಲಿ ಕಲ್ಲುಗಣಿಗಾರಿಕೆ

ಜಿಲ್ಲೆಯಲ್ಲಿ ಕಲ್ಲು ಗಣಿ ಗುತ್ತಿಗೆಯಡಿ 128 ಕಲ್ಲುಗಣಿ ಗುತ್ತಿಗೆ ನೀಡಿದ್ದು 270.12 ಎಕರೆ ಪ್ರದೇಶವಾಗಿದೆ. ಇದರಲ್ಲಿ ಪ್ರಸ್ತುತ ಪಟ್ಟಾ ಭೂಮಿಯಲ್ಲಿ 75 ಕ್ಕೆ ಅನುಮತಿ ನೀಡಿದ್ದು ಇದಲ್ಲಿ 21 ಸ್ಥಗಿತವಾಗಿ 54 ನಡೆಯುತ್ತಿವೆ. ಸರ್ಕಾರಿ ಜಾಗದಲ್ಲಿ 53 ಕ್ಕೆ ಅನುಮತಿ ನೀಡಿದ್ದು ಇದರಲ್ಲಿ 21 ಸ್ಥಗಿತವಾಗಿ 32 ನಡೆಯುತ್ತಿವೆ.

ತಾಲ್ಲೂಕುವಾರು ವಿವರದನ್ವಯ

ದಾವಣಗೆರೆ ತಾ; 57 ಕ್ಕೆ 149.35 ಎಕರೆಗೆ ಅನುಮತಿ ನೀಡಿದ್ದು ಪಟ್ಟಾ ಭೂಮಿಯಲ್ಲಿ 44 ರಲ್ಲಿ 14 ಸ್ಥಗಿತವಾಗಿ 30 ನಡೆಯುತ್ತಿವೆ. ಸರ್ಕಾರಿ ಭೂಮಿಯಲ್ಲಿ 13 ರಲ್ಲಿ 9 ನಡೆಯುತ್ತಿವೆ. ಜಗಳೂರು ತಾಲ್ಲೂಕಿನಲ್ಲಿ 4 ಕ್ಕೆ 10.02 ಎಕರೆ ಪ್ರದೇಶಕ್ಕೆ ಅನುಮತಿ ನೀಡಿದ್ದು ಇದರಲ್ಲಿ ಪಟ್ಟಾ ಭೂಮಿಯಲ್ಲಿ 2, ಸರ್ಕಾರಿ ಜಾಗದಲ್ಲಿ ನೀಡಿದ 2 ಸಹ ಸ್ಥಗಿತವಾಗಿವೆ. ಚನ್ನಗಿರಿ ತಾಲ್ಲೂಕಿನಲ್ಲಿ 35 ಕ್ಕೆ 42.32 ಎಕರೆ ವಿಸ್ತೀರ್ಣದಲ್ಲಿ ನೀಡಿದ್ದು ಪಟ್ಟಾ ಭೂಮಿಯಲ್ಲಿ ನೀಡಲಾದ 3 ರಲ್ಲಿ 1 ಸ್ಥಗಿತವಾಗಿದೆ. 32 ಸರ್ಕಾರಿ ಜಾಗದಲ್ಲಿ 14 ಸ್ಥಗಿತವಾಗಿ 18 ನಡೆಯುತ್ತಿವೆ. ಹೊನ್ನಾಳಿ ತಾ; 16 ಕ್ಕೆ 39.21 ಎಕರೆ ನೀಡಿದ್ದು 10 ಪಟ್ಟಾ ಭೂಮಿಯಲ್ಲಿ 3 ಸ್ಥಗಿತ, 7 ನಡೆಯುತ್ತಿವೆ. ಸರ್ಕಾರಿ ಭೂಮಿಯಲ್ಲಿ ನೀಡಲಾದ 6 ರಲ್ಲಿ 1 ಸ್ಥಗಿತವಾಗಿ 5 ನಡೆಯುತ್ತಿವೆ. ನ್ಯಾಮತಿ ತಾ; 16 ಕ್ಕೆ 27.24 ಎಕರೆಗೆ ಗುತ್ತಿಗೆ ನೀಡಿದ್ದು 16 ಪಟ್ಟಾ ಭೂಮಿಯಲ್ಲಿ 3 ಸ್ಥಗಿತವಾಗಿ 13 ನಡೆಯುತ್ತಿವೆ. ಹರಿಹರ ತಾಲ್ಲೂಕಿನಲ್ಲಿ ಯಾವುದೇ ಕಲ್ಲುಗಣಿ ಗುತ್ತಿಗೆ ನೀಡಿರುವುದಿಲ್ಲ.

ಈ ವೇಳೆ ಉಪಲೋಕಾಯುಕ್ತರೊಂದಿಗೆ ಲೋಕಾಯುಕ್ತ ಅಪರ ನಿಬಂಧಕರಾದ ಕೆ.ಎಂ.ರಾಜಶೇಖರ್, ಉಪನಿಬಂಧಕರಾದ ಅರವಿಂದ್ ಎನ್.ವಿ, ಮಿಲನ ವಿ.ಎನ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ್ ಎಂ.ಕರಣ್ಣನವರ, ಜಿಲ್ಲಾಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌ¯ಪೂರೆ, ಹಿರಿಯ ಭೂ ವಿಜ್ಞಾನಿ ರಶ್ಮಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top