ಪ್ರತ್ಯೇಕ ಬಸವ, ರೇಣುಕಾಚಾರ್ಯ ಜಯಂತಿ ಆಚರಣೆಗೆ ಶಾಮನೂರು ಶಿವಶಂಕರಪ್ಪ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಬಸವ ಜಯಂತಿಯೊಂದಿಗೆ ರೇಣುಕಾಚಾರ್ಯ ಜಯಂತಿ ಆಚರಣೆ ಮಾಡುವಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕ ಹೊರಡಿಸಿದ್ದ ಸುತ್ತೋಲೆ ಹಿಂಪಡೆದು ಪ್ರತ್ಯೇಕ ಬಸವ , ರೇಣುಕಾಚಾರ್ಯ ಜಯಂತಿ ಆಚರಣೆ‌‌ ಮಾಡುವಂತೆ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸೂಚನೆ ನೀಡಿದ್ದಾರೆ.

ಹಿಂದಿನಂತೆ ಬಸವ, ರೇಣುಕಾಚಾರ್ಯರು ಜಯಂತಿ

ಈ ಹಿಂದಿನಂತೆ ಬಸವ ಜಯಂತಿ, ರೇಣುಕಾಚಾರ್ಯರು ಹಾಗೂ ಇತರರ ಜಯಂತಿಯನ್ನು ಪ್ರತ್ಯೇಕವಾಗಿ ಆಚರಿಸಲು ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳಿಗೆ ಸೂಚನೆ ಕೊಡಲಾಗಿದೆ.  ಎರಡು ಜಯಂತಿಯನ್ನು ಒಂದೇ ದಿನ ಆಚರಣೆಗೆ ಬಸವ ಪರ ಸಂಘಟನೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ರಾಜ್ಯ ಘಟಕದ ಕಾರ್ಯದರ್ಶಿ ಎಚ್.ಎಂ. ರೇಣುಕಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿವಾದ ಇಲ್ಲಿಗೆ ಕೊನೆಗೊಳಿಸಿ ಸಮಾಜದ ಏಕತೆ ಪ್ರದರ್ಶಿಸಬೇಕು. ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಮತ್ತು ಸಾಮರಸ್ಯ ಕಾಪಾಡುವ ದೃಷ್ಟಿಯಿಂದ ಮಹಾಸಭಾ ರಾಜ್ಯ ಘಟಕ ಹೊರಡಿಸಿರುವ ಸುತ್ತೋಲೆ ಹಿಂಪಡೆಯಲು ಶಾಮನೂರು ಶಿವಶಂಕರಪ್ಪ ಸೂಚಿಸಿದ್ದಾರೆ ಎಂದು ರೇಣುಕಪ್ರಸನ್ನ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *