ದಾವಣಗೆರೆ: ಆಸ್ತಿ‌ ವಿವಾದ; 1,200ಕ್ಕೂ ಅಧಿಕ ಅಡಿಕೆ ಮರ ನಾಶ ಮಾಡಿದ ದುಷ್ಕರ್ಮಿಗಳು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಸುಮಾರು 1,200ಕ್ಕೂ ಅಧಿಕ ಅಡಿಕೆ (arecanut) ಮರಗಳನ್ನು ದುಷ್ಕರ್ಮಿಗಳು ನಾಶ ಮಾಡಿದ ಘಟನೆ ಜಿಲ್ಲೆಯ ಅಣಬೇರು ಗ್ರಾಮದಲ್ಲಿ ನಡೆದಿದೆ.

ಪುಷ್ಪವತಿ ಎಂಬುವವರಿಗೆ ಸೇರಿದ ತೋಟಕ್ಕೆ ನುಗ್ಗಿ ದುಷ್ಕರ್ಮಿಗಳು ಅಡಿಕೆ ಮರ ನಾಶ ಮಾಡಿದ್ದಾರೆ. ಪುಷ್ಪವತಿ ಎರಡೂವರೆ ಎಕರೆ ಜಮೀನಿನಲ್ಲಿ ಅಡಕೆ ಮರಗಳನ್ನು ಬೆಳೆಸಿದ್ದರು.

ಕಳೆದ ಹಲವಾರು ವರ್ಷಗಳಿಂದ ಸಂಬಂಧಿಗಳ ನಡುವೆ ಜಮೀನಿನ ವಿಚಾರವಾಗಿ ಜಗಳ ನಡೆಯುತ್ತಿತ್ತು. ಸರ್ವೇ ಮಾಡಿಸಿದಾಗ ಪುಷ್ಪವತಿ ಹೆಚ್ಚುವರಿ ಭೂಮಿ ಇರುವುದು ಗೊತ್ತಾಗಿದೆ. ಈ ಜಮೀನು ಬಿಡುವುದಿಲ್ಲ. ಪಕ್ಕದ ಜಮೀನಿನಲ್ಲಿ ಬಿಟ್ಟುಕೊಡುವುದಾಗಿ ಪುಷ್ಪವತಿ ಹೇಳಿದ್ದರೂ, ರಾತ್ರೋರಾತ್ರಿ ಟ್ರ್ಯಾಕ್ಟರ್ ಬಳಸಿ ಸಂಬಂಧಿಕರು ಅಡಕೆ ತೋಟ ನಾಶ ಮಾಡಿದ್ದಾರೆ. ಈ ಬಗ್ಗೆ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *