ದಾವಣಗೆರೆ: ಭಾರೀ ಏರಿಕೆ ಕಂಡು ದಿಢೀರ್ ಕುಸಿದ ಅಡಿಕೆ ದರ ; ಮೇ 05ರ ಕನಿಷ್ಠ,‌ ಗರಿಷ್ಠ ರೇಟ್ ಎಷ್ಟಿದೆ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರವು (arecanut rate) ಏ.23 ರಂದು ಗರಿಷ್ಠ 60,669 ರೂ. ಇದ್ದ ಬೆಲೆ,‌ಈಗ ಏಕಾಏಕಿ 3 ಸಾವಿರ ಕುಸಿತ ಕಂಡಿದೆ‌. ಇಂದು (ಮೇ.05) ಗರಿಷ್ಠ ಬೆಲೆ ಪ್ರತಿ ಕ್ವಿಂಟಲ್ ಗೆ 58,600ರೂ.ಗೆ ಕುಸಿದಿದೆ.

ಮೇ 05 ಚನ್ನಗಿರಿ ರಾಶಿ ಅಡಿಕೆ ಧಾರಣೆ (ಪ್ರತಿ ಕ್ವಿಂಟಲ್ ದರ)

  • ಗರಿಷ್ಠ ಬೆಲೆ 57,621
  • ಕನಿಷ್ಠ ಬೆಲೆ 53,479
  • ಸರಾಸರಿ ಬೆಲೆ 56,285

ಬೆಟ್ಟೆ ಅಡಿಕೆ ದರ

  • ಗರಿಷ್ಠ ಬೆಲೆ 36,769
  • ಕನಿಷ್ಠ ಬೆಲೆ 28,187
  • ಸರಾಸರಿ ಬೆಲೆ 32,478

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ (Channagiri) ವಹಿವಾಟಿನಲ್ಲಿ‌ ಮೇ 5ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 57,621 ಇದ್ದು, ಕನಿಷ್ಠ ಬೆಲೆ 53,479 ರೂ., ಸರಾಸರಿ ಬೆಲೆ 56,285 ರೂ.‌ಇದೆ.

ಬಿಸಿಲಿನ ತಾಪಮಾನ ಹೆಚ್ಚಳ

ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಗರಿಷ್ಠ ಮಟ್ಟಕ್ಕೆ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಕೆಲವು‌ ಕಡೆ ಉತ್ತಮ ಮಳೆಯಾಗಿದೆ.‌ ಕೆಲವಡೆ ಬಿಸಿಲಿನ ತಾಪಮಾನ ಹೆಚ್ಚಳದಿಂದ ಅಡಿಕೆಗೆ ಎಲೆಚುಕ್ಕಿ ರೋಗ, ಹಳದಿ ಎಲೆ ರೋಗ ಸೇರಿದಂತೆ ಹಲವು ರೋಗಗಳು ಕಾಣಿಸಿಕೊಳ್ಳುತ್ತಿವೆ.‌ ಹೀಗಾಗಿ ಅಡಿಕೆ ತೋಟಗಳ ರಕ್ಷಣೆಗೆ ರೈತರು ಮುಂಜಾಗ್ರತಾ ಕ್ರಮಕೈಗೊಳ್ಳಬೇಕಿದೆ.

ಜನವರಿ ಕೊನೆಯಲ್ಲಿ 52 ಸಾವಿರ ಒಳಗೆ ಇದ್ದ ದರ, ಫೆಬ್ರವರಿಯಲ್ಲಿ ಮತ್ತೆ 53 ಸಾವಿರ ಗಡಿ ದಾಟಿತ್ತು. ಮಾರ್ಚ್ ಮೊದಲ ವಾರದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ತಿಂಗಳ ಕೊನೆಯಲ್ಲಿ ಮತ್ತೆ 53 ಸಾವಿರ ಗಡಿ ಮುಟ್ಟಿತ್ತು. ಏಪ್ರಿಲ್ ತಿಂಗಳಲ್ಲಿ 23ರಂದು ಗರಿಷ್ಠ ಬೆಲೆ 60,669 ರೂ. ಇತ್ತು. ತಿಂಗಳ ಕೊನೆಯಲ್ಲಿ 59 ಸಾವಿರ ಒಳಗೆ ಬಂದಿತ್ತು. ಈಗ ಮೇ ತಿಂಗಳ ಆರಂಭದಲ್ಲಿ ಮತ್ತಷ್ಟು ಕುಸಿದು 57,620 ರೂ. ಇದೆ. 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಕಳೆದ ವರ್ಷ (2024) ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿತ್ತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *