Connect with us

Dvgsuddi Kannada | online news portal | Kannada news online

ದಾವಣಗೆರೆ: ಕುಖ್ಯಾತ ರೌಡಿಶೀಟರ್ ಕಣುಮ ಹ*ತ್ಯೆ; 10 ಆರೋಪಿಗಳು ಪೊಲೀಸರಿಗೆ ಶರಣು; 12 ಜನರ ವಿರುದ್ಧ ಎಫ್ ಐಆರ್ ದಾಖಲು

dvg kanuma case

ಪ್ರಮುಖ ಸುದ್ದಿ

ದಾವಣಗೆರೆ: ಕುಖ್ಯಾತ ರೌಡಿಶೀಟರ್ ಕಣುಮ ಹ*ತ್ಯೆ; 10 ಆರೋಪಿಗಳು ಪೊಲೀಸರಿಗೆ ಶರಣು; 12 ಜನರ ವಿರುದ್ಧ ಎಫ್ ಐಆರ್ ದಾಖಲು

ದಾವಣಗೆರೆ; ಕುಖ್ಯಾತ ರೌಡಿಶೀಟರ್ ಕಣುಮ (ಸಂತೋಷ್ ಕುಮಾರ್) ಹ*ತ್ಯೆ ಪ್ರಕರಣದ 10 ಮಂದಿ ಆರೋಪಿಗಳು ಹೊಳಲ್ಕೆರೆ ಠಾಣೆ ಪೊಲೀಸರ ಎದುರುಶರಣಾಗಿದ್ದಾರೆ. ಈ‌ ಮೂಲಕ ದಾವಣಗೆರೆ ರೌಡಿಶೀಟರ್ ಹ*ತ್ಯೆ ನಡೆದು 24 ತಾಸಿನಲ್ಲಿ ಬಂಧನ ಮಾಡಲಾಗಿದೆ. ಪ್ರಕರಣ ಸಂಬಂಧ 12 ಜನರ ವಿರುದ್ಧ ದಾವಣಗೆರೆಯ ವಿದ್ಯಾನಗರ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಕಣುಮನ ಆಪ್ತರಿಂದಲೇ ಕೊ*ಲೆ

ಕಣುಮ ಪತ್ನಿ ಶೃತಿ ನೀಡಿದ ದೂರಿನ ಮೇರೆಗೆ ಆರೋಪಿಗಳಾದ ಕಾರ್ತಿಕ್(22), ಚವಳಿ ಸಂತು(30), ನವೀನ್(26) ನವೀನ್(26), ಗುಂಡಪ್ಪ(32), ಬಸವರಾಜ್(22), ಹನುಮಂತಪ್ಪ(23), ಗಿಡ್ಡ ವಿಜಿ(27), ಚಿಕ್ಕಮ್ಮನಹಳ್ಳಿ ಶಿವು(30), ಕಡ್ಡಿ ರಾಘು(27), ಪ್ರಶಾಂತ್ (28) ಮತ್ತು ನಿಟ್ಟುವಳ್ಳಿಯ ಗಣಿ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೊ*ಲೆ ಮಾಡಿದ ಎಲ್ಲಾ ಆರೋಪಿಗಳು 22 ರಿಂದ 30 ವರ್ಷ‌‌‌ ವಯಸ್ಸಿನ ಯುವಕರಾಗಿದ್ದಾರೆ. ಈ ಎಲ್ಲಾ ಆರೋಪಿಗಳು ಕಣುಮನ ಆಪ್ತರಾಗಿದ್ದಾರೆ.

ಮಾರಿಕಣವಿ ನಿವಾಸಿ

ಸೋಮವಾರ ದಾವಣಗೆರೆಯ ಸೋಮೇಶ್ವರ ಆಸ್ಪತ್ರೆ ಬಳಿಯ ಕ್ಲಬ್ ವೊಂದರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಣುಮನನ್ನು ಹ*ತ್ಯೆಗೈದಿದ್ದರು. ಕಣುಮ​ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಿರಿಯೂರ ಬಳಿಯ ಮಾರಿ ಕಣವಿ ನಿವಾಸಿಯಾಗಿದ್ದನು. ಸಂತೋಷ ಕುಮಾರ್​ ತಾಯಿ ಊರು ದಾವಣಗೆರೆ. ಹೀಗಾಗಿ ದಾವಣಗೆರೆಯಲ್ಲಿ ನೆಲೆಸಿದ್ದರು. ಪ್ರಾರಂಭದ ದಿನಗಳಲ್ಲಿ ಸೊಪ್ಪು ಮಾರುತ್ತಿದ್ದ‌ ಕಣುಮ, ನಂತರ, ರೌಡಿಸಂಗೆ ಇಳಿದು ರಿಯಲ್ ಎಸ್ಟೇಟ್ ನಲ್ಲಿ ತೊಡಗಿಕೊಂಡಿದ್ದನು. ಇದೇ ಕುಣುಮ ರೌಡಿಶೀಟರ್ ಗಳಾದ ಬುಳ್ಳ್ ನಾಗಾ, ಯೋಗಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದನು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • astrology today astrology today

    ಪ್ರಮುಖ ಸುದ್ದಿ

    ಭಾನುವಾರದ ರಾಶಿ ಭವಿಷ್ಯ 01 ಜೂನ್ 2025

    By

    ಈ ರಾಶಿಯವರಿಗೆ ವಿದೇಶ ಯೋಗ, ಈ ರಾಶಿಯವರಿಗೆ ಮದುವೆ ಯೋಗ, ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ, ಭಾನುವಾರದ ರಾಶಿ ಭವಿಷ್ಯ 01...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 31 ಮೇ 2025

    By

    ಈ ರಾಶಿಯ ಕಲಾವಿದರಿಗೆ ಶುಭ ಸಂದೇಶ, ಈ ರಾಶಿಯವರಿಗೆ ಎಲ್ಲಾ ಇದ್ದು ಏನೂ ಕೈಗೂಡುತ್ತಿಲ್ಲ, ಶನಿವಾರದ ರಾಶಿ ಭವಿಷ್ಯ 31 ಮೇ...

  • astrology today astrology today

    ಪ್ರಮುಖ ಸುದ್ದಿ

    ಶುಕ್ರವಾರದ ರಾಶಿ ಭವಿಷ್ಯ 30 ಮೇ 2025

    By

    ಈ ರಾಶಿಯವರ ವ್ಯಾಪಾರಕ್ಕೆ ಗ್ರಾಹಕರ ಕೊರತೆ, ಈ ರಾಶಿಯವರ ಮದುವೆಗೆ ಬಂದ ಸಂಬಂಧ ಫಿಕ್ಸ್ ಆಗುತ್ತಿಲ್ಲ , ಶುಕ್ರವಾರದ ರಾಶಿ ಭವಿಷ್ಯ...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 29 ಮೇ 2025

    By

    ಈ ರಾಶಿಯವರಿಗೆ ಬಂಪರ್, ಈ ರಾಶಿಯವರಿಗೆ ಮದುವೆ ಯೋಗ, ಈ ರಾಶಿ ದಂಪತಿಗಳಿಗೆ ಸಂತಾನ ಭಾಗ್ಯ, ಗುರುವಾರದ ರಾಶಿ ಭವಿಷ್ಯ 29...

To Top