ಬೆಂಗಳೂರು: ಇಂದಿನಿಂದ ರಾಜ್ಯದ ಒಂದು ವಾರ ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದ ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿಲ್ಲ. ಆದರೆ, ಈ ವಾರ ಬಹುತೇಕ ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆ ಇದೆ.
ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.ದಕ್ಷಿಣ ಕನ್ನಡ, ಕೊಡಗು, ಮೈಸೂರು, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಹಾವೇರಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ.
ಬೆಂಗಳೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ, ತುಮಕೂರು, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.



