ದಾವಣಗೆರೆ: ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳನ್ನು ಡಿಜಿಟಲ್ ಭೂ ದಾಖಲೆಗಳ ವಿತರಣೆ ಮೂಲಕ ಸಾರ್ವಜನಿಕರಿಗೆ ಒದಗಿಸುವ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.
ಡಿಜಿಟಲ್ ದಾಖಲೆಗಳಿಗೆ ಈ ವೆಬ್ ಸೈಟ್ ಗೆ ಭೇಟಿ ನೀಡಿ
ಕಂದಾಯ ಸಚಿವರ ನಿರ್ದೇಶನದಂತೆ, ದಾಖಲೆ ಶಾಖೆಯಲ್ಲಿರುವ ಕಂದಾಯ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಯ ವೆಬ್ಸೈಟ್ https://recordroom.karnataka.gov.in/service4 ಮೂಲಕವೇ ಸಾರ್ವಜನಿಕರಿಗೆ ವಿತರಿಸುವ ಉದ್ದೇಶ ಹೊಂದಲಾಗಿದೆ.
ಎರಡು ದಿನದಲ್ಲಿ ಡಿಜಿಟಲ್ ಪ್ರತಿ ಲಭ್ಯ
ಪ್ರಾರಂಭಿಕ ಹಂತದಲ್ಲಿ ಪ್ರತಿದಿನ ಕನಿಷ್ಠ 10 ಅರ್ಜಿಗಳನ್ನು ಆನ್ಲೈನ್ ಮೂಲಕ ಪಡೆದು, ಡಿಜಿಟಲ್ ಪ್ರತಿಗಳನ್ನು 2 ದಿನಗಳೊಳಗೆ ನೀಡಬೇಕು. ಒಂದು ವೇಳೆ ಕೋರಿರುವ
ದಾಖಲೆಗಳು ಸ್ಕ್ಯಾನಿಂಗ್ ಆಗದೇ ಇದ್ದಲ್ಲಿ 7 ದಿನಗಳಲ್ಲಿಸ್ಕ್ಯಾನಿಂಗ್ ಮಾಡಿ ಡಿಜಿಟಲ್ ಪ್ರತಿಯನ್ನೇ ವಿತರಿಸಲು
ಅಧಿಕಾರಿಗಳಿಗೆ ಸೂಚಿಸಿದ್ದಾರೆ.



