Connect with us

Dvgsuddi Kannada | online news portal | Kannada news online

ದಾವಣಗೆರೆ: ಮಳೆಯಾಶ್ರಿತ ಭತ್ತ ; ನೇರ ಕೂರಿಗೆ ಬಿತ್ತನೆಯ ಪ್ರಾತ್ಯಕ್ಷಿಕೆ

davangere paddy news

ಜಗಳೂರು

ದಾವಣಗೆರೆ: ಮಳೆಯಾಶ್ರಿತ ಭತ್ತ ; ನೇರ ಕೂರಿಗೆ ಬಿತ್ತನೆಯ ಪ್ರಾತ್ಯಕ್ಷಿಕೆ

ದಾವಣಗೆರೆ: ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ದಾವಣಗೆರೆ ಹಾಗೂ ಬಿದರಕೆರೆ ತರಳಬಾಳು ಅಮೃತ ರೈತ ಉತ್ಪಾದಕ ಕಂಪನಿಯ ಸಹಯೋಗದೊಂದಿಗೆ ತಾಲ್ಲೂಕಿನ ಮೆದಗಿನಕೆರೆ ಗ್ರಾಮದಲ್ಲಿ ನೇರ ಕೂರಿಗೆ ಭತ್ತ ಬಿತ್ತನೆಯ ಪ್ರಾತ್ಯಕ್ಷಿಕೆ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಆಯೋಜಿಸಲಾಗಿತ್ತು

ಒಂದು ಎಕರೆಗೆ 10 ಕೆ.ಜಿ. ಬಿತ್ತನೆ

ಮಳೆಯಾಶ್ರಿತ ಜಗಳೂರು ತಾಲ್ಲೂಕಿನಲ್ಲೂ ಭತ್ತವನ್ನು ಬೆಳೆಯಬಹುದು. ಒಂದು ಎಕರೆ ಪ್ರದೇಶಕ್ಕೆ 10 ಕೆ.ಜಿ. ಬಿತ್ತನೆ ಬೀಜ ಬೇಕಾಗುತ್ತದೆ. ಸುಧಾರಿತ ತಳಿಯಾದ ಆರ್‌ಎನ್‍ಆರ್-15048 ಬಿತ್ತನೆ ಮಾಡಬಹುದು. ಎತ್ತಿನ ಬೇಸಾಯ ಮಾಡುವುದರಿಂದ ಹೆಚ್ಚಿನ ಇಳುವರಿ ಪಡೆಯಬಹುದು ಎಂದು ತೋಟಗಾರಿಕಾ ತಜ್ಞ ಎಂ.ಜಿ. ಬಸವನಗೌಡ ಮಾಹಿತಿ ನೀಡಿದರು..

ಅಡಿಕೆಯಲ್ಲಿ ದ್ವಿದಳ ಧಾನ್ಯ ಬೆಳೆಯುವುದು ಸೂಕ್ತ

ಆರೋಗ್ಯಕರ ಫಸಲು ಮತ್ತು ಇಳುವರಿ ಹೆಚ್ಚಿಸಲು ಅಡಿಕೆ ತೋಟಗಳಲ್ಲಿ ದ್ವಿದಳ ಧಾನ್ಯ ಬೆಳೆಯುವುದು ಸೂಕ್ತ. ಈರುಳ್ಳಿ ಬೆಳೆಯುವ ರೈತರು ತಜ್ಞರ ಸಲಹೆ ಪಡೆದು ತೋಟಗಾರಿಕಾ ವಿಶ್ವವಿದ್ಯಾಲಯಗಳು ಸಂಶೋಧಿಸಿರುವ ಆಧುನಿಕ ತಳಿಗಳನ್ನು ಬಿತ್ತನೆ ಮಾಡಿದರೆ ರೋಗ ಬಾಧೆ ನಿಯಂತ್ರಣ ಸಾಧ್ಯ ಎಂದರು.

ಅಡಿಕೆ ಬೆಳೆಗೆ ಕೆಂಪು, ಬಿಳಿ ನುಸಿ ರೋಗ

ಇತ್ತೀಚಿನ ವರ್ಷಗಳಲ್ಲಿ ರೈತರು ವ್ಯಾಪಕವಾಗಿ ಅಡಿಕೆ ಬೆಳೆಯತ್ತ ಮುಖಮಾಡುತ್ತಿದ್ದು, ಇದರಿಂದ ಅಡಿಕೆ ಬೆಳೆಗೆ ಕೆಂಪು ಮತ್ತು ಬಿಳಿ ನುಸಿ ರೋಗಗಳಿಗೆ ಕಾರಣವಾಗುತ್ತಿದೆ. ರೈತರು ಎಚ್ಚರ ವಹಿಸಬೇಕು ಎಂದು

ಕೂರಗೆ ಬಿತ್ತನೆಯಿಂದ ಅಧಿಕ ಲಾಭ

ಕೆವಿಕೆ ಬೇಸಾಯ ತಜ್ಞ ಬಿ.ಓ. ಮಲ್ಲಿಕಾರ್ಜುನ್ ಮಾತನಾಡಿ, ರಪೀಡಿತ ತಾಲ್ಲೂಕಿನಲ್ಲಿ ಇತ್ತೀಚಿಗೆ ಉತ್ತಮ ಮಳೆಯಾಗುತ್ತಿದ್ದು, ಇಲ್ಲಿನ ರೈತರು ರಾಗಿ ಬೆಳೆ ಮಾದರಿಯಲ್ಲಿ ಕೂರಿಗೆ ಭತ್ತ ಬಿತ್ತನೆ ಮಾಡುವ ಮೂಲಕ ಲಾಭದಾಯಕ ಕೃಷಿ ಕೈಗೊಳ್ಳಬಹುದು ಎಂದರು.

ಈ ಸಂದರ್ಭದಲ್ಲಿ ಕೆವಿಕೆಯ ಸುಪ್ರಿಯ ಪಾಟೀಲ್, ಬಿದರಕೆರೆ ಎಫ್‍ಪಿಒ ಅಧ್ಯಕ್ಷ ಎಂ.ಎಚ್.ಮಂಜುನಾಥ್, ಉಪಾಧ್ಯಕ್ಷ ಎಸ್.ಎಂ.ಸೋಮನಗೌಡ, ನಿರ್ದೇಶಕ ಗುತ್ತಿದುರ್ಗ ಬಸವನಗೌಡ, ರೈತರು ಭಾಗವಹಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಗಳೂರು

To Top