ದಾವಣಗೆರೆ; ಮಕ್ಕಳಲ್ಲಿ ಶಿಸ್ತು ಮೂಡಿಸುವುದು, ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಪ್ರತಿ ಮಗುವನ್ನು ವಿಶ್ವ ದರ್ಜೆ ಎತ್ತರಕ್ಕೆ ಬೆಳೆಸುವುದು ಪೊಲೀಸ್ ಪಬ್ಲಿಕ್ ಶಾಲೆ ಗುರಿಯಾಗಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ಹೇಳಿದರು.
ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದ ಪೊಲೀಸ್ ಪಬ್ಲಿಕ್ ಶಾಲೆಯ ಪುನಾರಾರಂಭದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಶಾಲೆಯ ಶಿಕ್ಷಕರು ಪ್ರತಿ ಮಗುವನ್ನು ವೈಯಕ್ತಿಕ ಕಾಳಜಿ ಮಾಡುವ ಮೂಲಕ ಮಕ್ಕಳ ಸಮಗ್ರ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ಶಾಲೆಯ ಮಕ್ಕಳು ಶೈಕ್ಷಣಿಕ ಕ್ಷೇತ್ರವಲ್ಲದೆ ಕ್ರೀಡೆ, ವಿಜ್ಞಾನ ,ಸಾಮಾಜಿಕ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದೆ. ಶಾಲಾ ಮಕ್ಕಳು ಅತ್ಯಂತ ಉತ್ಸಾಹದಿಂದ ಮೊದಲ ದಿನದ ಸಂಭ್ರಮಕ್ಕೆ ಸಾಕ್ಷಿಯಾದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಡಿಎಆರ್ ಡಿವೈಎಸ್ಪಿ ಪ್ರಕಾಶ್ ಪಿ ಬಿ ಹಾಗೂ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.



