Connect with us

Dvgsuddi Kannada | online news portal | Kannada news online

ನಾಳೆ ಸಿಎಂ ದಾವಣಗೆರೆಗೆ ಆಗಮನ; ರಸ್ತೆ ಮಾರ್ಗದಲ್ಲಿ ಬದಲಾವಣೆ, ಕಾರ್ಯಕ್ರಮಕ್ಕೆ ಬರುವ ವಾಹನಗಳ ಪಾರ್ಕಿಂಗ್ ಸ್ಥಳ ವಿವರ ಇಲ್ಲಿದೆ..

davangere traffic

ದಾವಣಗೆರೆ

ನಾಳೆ ಸಿಎಂ ದಾವಣಗೆರೆಗೆ ಆಗಮನ; ರಸ್ತೆ ಮಾರ್ಗದಲ್ಲಿ ಬದಲಾವಣೆ, ಕಾರ್ಯಕ್ರಮಕ್ಕೆ ಬರುವ ವಾಹನಗಳ ಪಾರ್ಕಿಂಗ್ ಸ್ಥಳ ವಿವರ ಇಲ್ಲಿದೆ..

ದಾವಣಗೆರೆ: ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಮತ್ತು ಸಾರ್ವಜನಿಕ ಸಭೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ ನಾಳೆ (ಜೂ.16) ದಾವಣಗೆರೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲಗಲಿ ಸಾರ್ವಜನಿಕ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರು ನಿಗಧಿಪಡಿಸಿದ ಮಾರ್ಗಗಳಲ್ಲಿ ಸಂಚರಿಸುವುದು ಹಾಗೂ ನಿಗಧಿಪಡಿಸಿದ ಪಾರ್ಕಿಂಗ್ ಸ್ಥಳಗಳಲ್ಲಿ ತಮ್ಮ ವಾಹನಗಳನ್ನು ಪಾರ್ಕಿಂಗ್ ಮಾಡಲು ಈ ಮೂಲಕ ತಿಳಿಸಲಾಗಿದೆ.

ಸೂಕ್ತ ಭದ್ರತೆ ದೃಷ್ಟಿಯಿಂದ ಮಾರ್ಗ ಬದಲಾವಣೆ

ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಮತ್ತು ಇತರೆ ಮಂತ್ರಿಗಳು, ಶಾಸಕರುಗಳು ಗಣ್ಯರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿರುವ ಹಿನ್ನಲೆಯಲ್ಲಿ
ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆಗಾಗಿ ಹಾಗೂ ಗಣ್ಯರ ಸೂಕ್ತ ಭದ್ರತೆ ದೃಷ್ಟಿಯಿಂದ ಈ ಕೆಳಕಂಡಂತೆ ಸಾರ್ವಜನಿಕ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಎಲ್ಲಾ ವಾನ ಚಾಲಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಲು ತಿಳಿಸಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ಗಳು ಈ ಮಾರ್ಗದಲ್ಲಿ ಸಂಚಿಸಬೇಕು

1). ದಿನಾಂಕ:16-06-2025 ರಂದು ಬೆಳಿಗ್ಗೆ 08:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಹರಿಹರ ಕಡೆಯಿಂದ ದೊಡ್ಡಬಾತಿ ಮುಖಾಂತರ ದಾವಣಗೆರೆಗೆ ಹಳೇ ಪಿ.ಬಿ ರಸ್ತೆಯಲ್ಲಿ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಹರಿಹರ ನಗರದಿಂದ ನೇರವಾಗಿ ಶಿವಮೊಗ್ಗ ಬೈಪಾಸ್ ಮೂಲಕ ಎನ್.ಹೆಚ್-48ನಲ್ಲಿ ಚಲಿಸಿ ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಆವರಗೆರೆ ಮಾರ್ಗವಾಗಿ ಬಂದು ನೂತನವಾಗಿ ನಿರ್ಮಾಣವಾಗಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಹಾಗೂ ಹತ್ತಿಸಿಕೊಂಡು ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕ ಎನ್.ಹೆಚ್-48 ನಲ್ಲಿ ಕಾರ್ಯ ನಿರ್ವಹಿಸುವುದು.

2). ಚಿತ್ರದುರ್ಗ (ಎನ್.ಹೆಚ್-48 ರಸ್ತೆ) ಮತ್ತು ಸಂತೆಬೆನ್ನೂರು (ಬೀರೂರು-ಸಮ್ಮಸಗಿ ರಸ್ತೆ) ಮಾರ್ಗವಾಗಿ ಕಾರ್ಯಕ್ರಮಕ್ಕೆ
ಬರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಆವರಗೆರೆ ಮಾರ್ಗವಾಗಿ ಬಂದು ನೂತನವಾಗಿ ನಿರ್ಮಾಣವಾಗಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಹಾಗೂ ಹತ್ತಿಸಿಕೊಂಡು ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕ ಎನ್.ಹೆಚ್-48 ನಲ್ಲಿ ಕಾರ್ಯ ನಿರ್ವಹಿಸುವುದು.

3). ಜಗಳೂರು ಮತ್ತು ಕಂಚಿಕೆರೆ ಮಾರ್ಗವಾಗಿ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ
ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ನೇರವಾಗಿ ಅರಳಿಮರ ಮತ್ತು ವೆಂಕಟೇಶ್ವರ ಸರ್ಕಲ್‌ಗೆ ಆಗಮಿಸದೇ ಬೇತೂರು ಹಳ್ಳದ ಹತ್ತಿರ
ನೂತನವಾಗಿ ನಿರ್ಮಾಣವಾಗಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಹಾಗೂ
ಹತ್ತಿಸಿಕೊಂಡು ಅಲ್ಲಿಂದಲೇ ವಾಪಾಸ್ ಹೊರಡುವುದು.

4). ಚನ್ನಗಿರಿ ಕಡೆಯಿಂದ ಹದಡಿ ರಸ್ತೆ ಮೂಲಕ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ
ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಹದಡಿ ಅಂಡರ್ ಪಾಸ್ ಮೂಲಕ ಹದಡಿ ರಸ್ತೆಯ ಮಾಗನೂರು ಬಸಪ್ಪ ಮೈದಾನದಲ್ಲಿ ಪ್ರಯಾಣಿಕರನ್ನು‌ ಇಳಿಸಿ ಹತ್ತಿಸಿಕೊಂಡು ಅಲ್ಲಿಂದಲೇ ವಾಪಸ್ ಹೊರಡುವುದು.

 

ಖಾಸಗಿ ಬಸ್ಸುಗಳು ಈ ಮಾರ್ಗದಲ್ಲಿ ಸಂಚರಿಸುವುದು

 

1) ದಿನಾಂಕ:16-06-2025 ರಂದು ಬೆಳಿಗ್ಗೆ 08:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಹರಿಹರ ಕಡೆಯಿಂದ ದೊಡ್ಡಬಾತಿ ಮುಖಾಂತರ ಹಳೇ ಪಿ.ಬಿ ರಸ್ತೆಯಲ್ಲಿ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾಖಾಸಗಿ ಬಸ್ಸುಗಳು ಹರಿಹರ ನಗರದಿಂದ ನೇರವಾಗಿ ಶಿವಮೊಗ್ಗ ಬೈಪಾಸ್ ಮೂಲಕ ಎನ್.ಹೆಚ್-48 ನಲ್ಲಿ ಚಲಿಸಿ ಬಾಡಾ‌ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಆವರಗೆರೆ ಮಾರ್ಗವಾಗಿ ಬಂದು ದನದ ಮಾರುಕಟ್ಟೆ ಸಮೀಪದ ಎ.ಪಿ.ಎಂ.ಸಿಆವರಣದಲ್ಲಿ ಪ್ರಯಾಣಿಕರನ್ನು ಇಳಿಸಿ ಹಾಗೂ ಹತ್ತಿಸಿಕೊಂಡು ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕಎನ್.ಹೆಚ್-48 ನಲ್ಲಿ ಕಾರ್ಯ ನಿರ್ವಹಿಸುವುದು

2) ಚಿತ್ರದುರ್ಗ (ಎನ್.ಹೆಚ್-48 ರಸ್ತೆ) ಮತ್ತು ಸಂತೆಬೆನ್ನೂರು (ಬೀರೂರು-ಸಮ್ಮಸಗಿ ರಸ್ತೆ) ಮಾರ್ಗವಾಗಿ ಕಾರ್ಯಕ್ರಮಕ್ಕೆ
ಬರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಖಾಸಗಿ ಬಸ್ಸುಗಳು ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ
ಆವರಗೆರೆ ಮಾರ್ಗವಾಗಿ ಬಂದು ದನದ ಮಾರುಕಟ್ಟೆ ಸಮೀಪದ ಎ.ಪಿ.ಎಂ.ಸಿ ಆವರಣದಲ್ಲಿ ಪ್ರಯಾಣಿಕರನ್ನು ಇಳಿಸಿ ಹಾಗೂ
ಹತ್ತಿಸಿಕೊಂಡು ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕ ಎನ್.ಹೆಚ್-48 ನಲ್ಲಿ ಕಾರ್ಯ ನಿರ್ವಹಿಸುವುದು.

3) ಜಗಳೂರು ಮತ್ತು ಕಂಚಿಕೆರೆ ಮಾರ್ಗವಾಗಿ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ
ಖಾಸಗಿ ಬಸ್ಸುಗಳು ನೇರವಾಗಿ ಅರಳಿಮರ ಮತ್ತು ವೆಂಕಟೇಶ್ವರ ಸರ್ಕಲ್‌ಗೆ ಆಗಮಿಸದೇ ಬೇತೂರು ಹಳ್ಳದ ಹತ್ತಿರ ನೂತನವಾಗಿ
ನಿರ್ಮಾಣವಾಗಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಹಾಗೂ ಹತ್ತಿಸಿಕೊಂಡು ಅಲ್ಲಿಂದಲೇ
ವಾಪಾಸ್ ಹೊರಡುವುದು.

4) ಚನ್ನಗಿರಿ ಕಡೆಯಿಂದ ಹದಡಿ ರಸ್ತೆ ಮೂಲಕ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ
ಖಾಸಗಿ ಬಸ್ಸುಗಳು ಹದಡಿ ಅಂಡರ್ ಪಾಸ್ ಮೂಲಕ ಹದಡಿ ರಸ್ತೆಯ ಮಾಗನೂರು ಬಸಪ್ಪ ಮೈದಾನದಲ್ಲಿ ಪ್ರಯಾಣಿಕರನ್ನು
ಇಳಿಸಿ ಹಾಗೂ ಹತ್ತಿಸಿಕೊಂಡು ಅಲ್ಲಿಂದಲೇ ವಾಪಾಸ್ ಹೊರಡುವುದು.

ಎಲ್ಲಾ ತರಹದ ಭಾರಿ & ಲಘು ಗೂಡ್ಸ್ ವಾಹನಗಳು

ದಿನಾಂಕ:16-06-2025 ರಂದು ಬೆಳಿಗ್ಗೆ 08:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಎಲ್ಲಾ ತರಹದ ಭಾರಿ &‌ಲಘು ಗೂಡ್ಸ್ ವಾಹನಗಳು ದಾವಣಗೆರೆ ನಗರದ ಹಳೇ ಪಿ.ಬಿ ರಸ್ತೆಯ ಆಯುರ್ವೇದಿಕ್ ಕಾಲೇಜ್ ನಿಂದ ಡಿ.ಸಿ.ಎಂ ಅಂಡ‌‌‌ ಬ್ರಿಡ್ಜ್ ವರೆಗೆ ಹಾಗೂ ನಗರದ ಹದಡಿ ರಸ್ತೆಯಲ್ಲಿ ಐ.ಟಿ.ಐ ಕಾಲೇಜ್ ಸರ್ಕಲ್ ನಿಂದ ಜಯದೇವ ಸರ್ಕಲ್ ಕಡೆಗೆಚಲಾಯಿಸದಂತೆ ಹಾಗೂ ನಗರದ ಶಾಮನೂರು ರಸ್ತೆಯಲ್ಲಿ ಶಾಮನೂರು ಅಂಡರ್ ಬ್ರಿಡ್ಜ್ ನಿಂದ ಲಕ್ಷ್ಮೀ ಫ್ಲೋರ್ ಮಿಲ್ & ಶಾರದಾಂಭ ಸರ್ಕಲ್ ಕಡೆಗೆ ಚಲಾಯಿಸದಂತೆ ನಿರ್ಭಂಧಿಸಲು ಕೋರಿದೆ.

ಖಾಸಗಿ ಬಸ್ ನಿಲ್ದಾಣ

ನಗರದಲ್ಲಿನ ಖಾಸಗಿ ಬಸ್ ನಿಲ್ದಾಣದ (ಎಂ.ಜಿ ಸರ್ಕಲ್ ಹತ್ತಿರ ಇರುವ) ಮೂಲಕ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ
ಬಸ್‌ಗಳು ದಿನಾಂಕ:16-06-2025 ರಂದು ಬೆಳಿಗ್ಗೆ 08:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಸದರಿ ಬಸ್
ನಿಲ್ದಾಣದಿಂದ ಕಾರ್ಯ ನಿರ್ವಹಿಸದಂತೆ ಹಾಗೂ ಅವುಗಳು ಆ ದಿನ ಎ.ಪಿ.ಎಂ.ಸಿ & ಮಾಗನೂರು ಬಸಪ್ಪ ಮೈದಾನದಿಂದ
ಕಾರ್ಯ ನಿರ್ವಹಿಸುವುದು.

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಗಮನಕ್ಕೆ

1. ಎಲ್ಲಾ ಬಸ್ ಗಳು ನಗರದ ಖಾಸಗಿ ಬಸ್‌
ನಿಲ್ದಾಣದಲ್ಲಿ ಹಾಗೂ ಅರುಣ ವೃತ್ತದಿದ ವಿನೋಬ ನಗರ 3 ನೇ ಮುಖ್ಯ ರಸ್ತೆಯ ಎಡಬಾಗದಲ್ಲಿ ಹಾಗೂ ನಗರದಪುಷ್ಪಾಂಜಲಿ ಚಿತ್ರಮಂದಿರದಿಂದ ಈರುಳ್ಳಿ ಮಾರ್ಕೇಟ್ ವರೆಗೆ ರೆಲ್ವೇ ಹಳಿ ಪಕ್ಕದಲ್ಲಿನ ಪಾರ್ಕಿಂಗ್ ಸ್ಥಳದಲ್ಲಿ ಬಸ್
ಗಳನ್ನು ನಿಲ್ಲಿಸುವುದು.

2. ಎಲ್ಲಾ ದ್ವಿ ಚಕ್ರ ವಾಹನಗಳು ದಾವಣಗೆರೆ
ನಗರದ ಬೀರಲಿಂಗೇಶ್ವರ ದೇವಾಸ್ಥಾನದ ಆವರಣ ಹಾಗೂ ಆರ್.ಎಲ್. ಲಾ ಕಾಲೇಜ್ ಹಿಂಬಾಗದ ಮೈದಾನದಲ್ಲಿನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸುವುದು.

3. ಕಾರ್ಯಕ್ರಮದ ನಿಮಿತ್ತ ಆಗಮಿಸುವ ಎಲ್ಲಾ ನಾಲ್ಕು ಚಕ್ರ ವಾಹನಗಳು ಅರುಣ ವೃತ್ತದ ಬಳಿ ಇರುವ ಹೊಳೆಹೊನ್ನೂರು ತೋಟದ ಖಾಲಿ ಜಾಗದಲ್ಲಿನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸುವುದು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top