Connect with us

Dvgsuddi Kannada | online news portal | Kannada news online

ಭದ್ರಾ ಜಲಾಶಯ; ನಾಲೆಗೆ ಹೊಸ ಗೇಟ್ ಅಳವಡಿಕೆ; ಒಂದೂವರೆ ತಿಂಗಳು ಎಡದಂಡೆ ನಾಲೆಗೆ ನೀರಿಲ್ಲ; ಭತ್ತ ಬೆಳೆಯದಂತೆ ಸಲಹೆ

brp dam

ದಾವಣಗೆರೆ

ಭದ್ರಾ ಜಲಾಶಯ; ನಾಲೆಗೆ ಹೊಸ ಗೇಟ್ ಅಳವಡಿಕೆ; ಒಂದೂವರೆ ತಿಂಗಳು ಎಡದಂಡೆ ನಾಲೆಗೆ ನೀರಿಲ್ಲ; ಭತ್ತ ಬೆಳೆಯದಂತೆ ಸಲಹೆ

ದಾವಣಗೆರೆ: ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರ ಅನುಮತಿ ಮೇರೆಗೆ ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಹೊಸ ಗೇಟ್ ಅಳವಡಿಕೆ ಕಾಮಗಾರಿ ಕೈಗೊಳ್ಳಬೇಕಾಗಿದೆ. ಇದರಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಎಡದಂಡೆ ನಾಲೆಯ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಸಾಧ್ಯವಾಗದು.

ನಾಲಾ ವ್ಯಾಪ್ತಿಯ ರೈತರು ನೀರಾವರಿ ಆಶ್ರಿತ ಬೆಳೆಗಳನ್ನು ಬೆಳೆಯಬಾರದೆಂದು ಭದ್ರಾ ಜಲಾಶಯದ ಅಧೀಕ್ಷಕ ಇಂಜಿನಿಯರ್ ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾವುದೇ ನೀರಾವರಿ ಆಶ್ರಿತ ಬೆಳೆ ಬೆಳೆಯದಂತೆ ಸೂಚನೆ

ಗೇಟ್ ಅಳವಡಿಕೆ ಕೆಲಸ ಸುಮಾರು ಒಂದೂವರೆ ತಿಂಗಳ ಕಾಲ ನಡೆಯಲಿದ್ದು ಎಡದಂಡೆ ನಾಲೆಯಿಂದ ಯಾವುದೇ ನೀರಾವರಿ ಬೆಳೆಗಳಿಗೆ ನೀರು ಬಿಡುವುದಿಲ್ಲ. ಆದ್ದರಿಂದ ಈ ನಾಲೆಯ ಅಚ್ಚುಕಟ್ಟು ಪ್ರದೇಶದ ರೈತರು ಭತ್ತ ಸೇರಿದಂತೆ ಯಾವುದೇ ನೀರಾವರಿ ಆಶ್ರಿತ ಬೆಳೆಗಳನ್ನು ಹಾಕಬಾರದೆಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top