Connect with us

Dvgsuddi Kannada | online news portal | Kannada news online

ದಾವಣಗೆರೆ: ರಾತ್ರೋರಾತ್ರಿ ದಾಳಿಂಬೆ ತೋಟಕ್ಕೆ ನುಗ್ಗಿದ ಕಳ್ಳರು; 4 ಟನ್‌ಗೂ ಹೆಚ್ಚು ದಾಳಿಂಬೆ ದೋಚಿ ಪರಾರಿ

DAVANAGERE crime

ಜಗಳೂರು

ದಾವಣಗೆರೆ: ರಾತ್ರೋರಾತ್ರಿ ದಾಳಿಂಬೆ ತೋಟಕ್ಕೆ ನುಗ್ಗಿದ ಕಳ್ಳರು; 4 ಟನ್‌ಗೂ ಹೆಚ್ಚು ದಾಳಿಂಬೆ ದೋಚಿ ಪರಾರಿ

ದಾವಣಗೆರೆ: ರಾತ್ರೋರಾತ್ರಿ ದಾಳಿಂಬೆ ತೋಟಕ್ಕೆ ನುಗ್ಗಿದ ಕಳ್ಳರು ಗ್ಯಾಂಗ್ , 4 ಟನ್‌ಗೂ ಹೆಚ್ಚು ದಾಳಿಂಬೆ ಹಣ್ಣು ದೋಚಿ ಪರಾರಿಯಾದ ಘಟನೆ ನಡೆದಿದೆ.

ಜಿಲ್ಲೆಯ ಜಗಳೂರು ತಾಲ್ಲೂಕಿನ ಹಿರೇಮಲ್ಲನಹೊಳೆ ಗ್ರಾಮದ ಬಳಿ ಘಟನೆ ನಡೆದಿದೆ. ಗ್ರಾಮದ ರವಿಕುಮಾರ್ ಎಂಬುವರ ತೋಟಕ್ಕೆ ನುಗ್ಗಿರುವ ಕಳ್ಳರ‌ ಗ್ಯಾಂಗ್, 3 ಲಕ್ಷ ಮೌಲ್ಯದ 4 ಟನ್‌ಗೂ ಹೆಚ್ಚು ಹಣ್ಣು ಕಿತ್ತುಕೊಂಡು ಹೋಗಿದ್ದಾರೆ. ಸಾಲ ಮಾಡಿ, ಬೆಳೆ ಬೆಳೆದಿದ್ದು, ಫಸಲು ಕೈ ಸೇರುವ ಮುನ್ನವೇ ಕಳ್ಳರ ಪಾಲಾಗಿದೆ ಎಂದು ರೈತ ಆತಂಕ ವ್ಯಕ್ತಪಡಿಸಿದ್ದಾನೆ. ಜಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಗಳೂರು

ದಾವಣಗೆರೆ

Advertisement
Advertisement Enter ad code here

Title

To Top