ಡಿವಿಜಿ ಸುದ್ದಿ, ದಾವಣಗೆರೆ: ಯಾವುದೇ ಮಠ ಮಂದಿರಗಳನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿಸುವ ಯೋಚನೆ ಇಲ್ಲ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿ, ಎಸ್ಟಿ ಪೂಜಾರಿಗಳ ನೇಮಕ ಕುರಿತು ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ದೇವಸ್ಥಾನಗಳಿಗೆ ಅದರದ್ದೇ ಆದ ಕಟ್ಟುಪಾಡುಗಳು, ಪರಂಪರೆ, ಇರುತ್ತದೆ, ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಸಾಮಾಜಿಕ ನ್ಯಾಯಕ್ಕೆ ಧಕ್ಕೆ ಬಂದಾಗ ಮಾತ್ರ ಸರ್ಕಾರ ಮಧ್ಯ ಪ್ರವೇಶ ಮಾಡುತ್ತೇ ಎಂದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಇತರರು ದೇಶ ದ್ರೋಹದ ವಿಚಾರ ಬಂದಾಗ ಆಕ್ರೋಶ ಭರಿತವಾಗಿಯೇ ಮಾತನಾಡಿರುವುದು ನಿಜ, ಹಿರಿಯ ಬಗ್ಗೆ ನಮಗೆ ಗೌರವ ಇದೆ. ದೊರೆಸ್ವಾಮೀಯವರ ಬಗ್ಗೆ ಏನು ಹೇಳಿದ್ದಾರೆ ಗೊತ್ತಿಲ್ಲ ಎಂದು ಹೇಳಿದರು.



