ದೆಹಲಿ ಗಲಭೆಗೆ ಬಿಜೆಪಿ ನಾಯಕರ ಪ್ರಚೋದನಕಾರಿ ಭಾಷಣ ಕಾರಣ: ಕುಮಾರಸ್ವಾಮಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ರಾಮನಗರ: ದೆಹಲಿಯಲ್ಲಿ ಸಿಎಎ ಪರ-ವಿರೋಧದ ಗಲಭೆಗೆ ಬಿಜೆಪಿ ನಾಯಕರ  ಪ್ರಚೋದನಕಾರಿ ಭಾಷಣ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

ಬಿಜೆಪಿಯವರು ಅಧಿಕಾರಕ್ಕಾಗಿ ಅಮಾಯಕರನ್ನು ಬಲಿ ತೆಗೆದುಕೊಳ್ಳಲು ಹೊರಟಿದ್ದಾರೆ.  ಭಾರತ ಹಿಂದೂ ರಾಷ್ಟ್ರ ವೇ, ಬಿಜೆಪಿಯವರು ಹೊಸದಾಗಿ ಏನು ಮಾಡಬೇಕಿಲ್ಲ. ಒಂದು ಕಡೆ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಕರೆ ತಂದು ಗುಜರಾತಿ‌ನಲ್ಲಿ ಮೆರವಣಿಗೆ ಮಾಡುತ್ತಾರೆ. ಇನ್ನೊಂದೆಡೆ ದೆಹಲಿಯಲ್ಲಿ ಗಲಭೆ ಸೃಷ್ಠಿಸುತ್ತಾರೆ. ಮುಂಬರುವ ದಿನಗಳಲ್ಲಿ ಜನರು ಎಲ್ಲರನ್ನೂ ಅರ್ಥಮಾಡಿಕೊಳ್ಳುತ್ತಾರೆ ಎಂದು ಕಿಡಿಕಾರಿದರು.

ದೊರೆಸ್ವಾಮಿ ಹೋರಾಟ ಮಾಡಿದಾಗ ಯತ್ನಾಳ್  ಹುಟ್ಟಿದ್ದರೋ ಇಲ್ಲವೋ ಗೊತ್ತಿಲ್ಲ.ಆರ್‌ಎಸ್‌ಎಸ್‌ ಫಲಕ, ತಿಲಕ ಇಟ್ಟುಕೊಂಡು ಬಂದು  ಆಟಾಡ್ತಾರೆ, ಆಡಲಿ.  ಮಹಾರಾಷ್ಟ್ರದ ತಾಕತ್ತು ದೊಡ್ಡದ, ಮಂಡ್ಯ ತಾಕತ್ತು ದೊಡ್ಡದ ಎಂದು ಮುಂದೆ ಜನರೇ ತೀರ್ಮಾನ ಮಾಡುತ್ತಾರೆ ಎಂದು ಮಹಾರಾಷ್ಟ್ರಕ್ಕೆ ಜೈಕಾರ ಹಾಕಿದ ಸಚಿವ ನಾರಾಯಣ ಗೌಡ ತರಾಟೆಗೆ ತಗೆದುಕೊಂಡರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *