ಭದ್ರಾವತಿ: ಜಾತಿಗೊಂದು ಮಠ ಹುಟ್ಟಿಕೊಂಡು ಸಮಾಜ ಕಲುಷಿತವಾಗಿದೆ ಎಂಬ ರಂಭಾಪುರಿ ಸ್ವಾಮೀಜಿ ಹೇಳಿಕೆಗೆ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ ಖಂಡನೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆಕನಕ, ವಾಲ್ಮೀಕಿ, ಭೋವಿ, ಯಾದವ, ಮಾದಾರ ಚನ್ನಯ್ಯ ಸೇರಿದಂತೆ 15ಕ್ಕೂ ಹೆಚ್ಚು ಮಠಾಧೀಶರು ಸುದ್ದಿಗೋಷ್ಠಿ ನಡೆಸಿ ಖಂಡಿಸಿದ್ದಾರೆ. ದಾವಣಗೆರೆಯಲ್ಲಿ ರಂಭಾಪುರಿ ಸ್ವಾಮೀಜಿ ನೀಡಿರುವ ತಮ್ಮ ಹೇಳಿಕೆಯನ್ನು ಬಹಿರಂಗವಾಗಿ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ರಂಭಾಪುರಿ ಸ್ವಾಮೀಜಿ ಇದೇ ರೀತಿಯ ಹೇಳಿಕೆ ಮುಂದುವರಿಸಿದರೆ ಹಿಂದುಳಿದ, ದಲಿತ ಮಠಾಧೀಶರೆಲ್ಲ ಸೇರಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದರು.
ಪಂಚಪೀಠದ ಅನೇಕ ಶಾಖಾ ಮಠಗಳು ಪರಿಶಿಷ್ಟ ಜಾತಿ ಹೆಸರಲ್ಲಿ ಸರ್ಕಾರದ ಅನುದಾನ ಪಡೆದಿದ್ದು, ಎಷ್ಟು ಹಣ ಪಡೆದಿವೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಲು ಆಗ್ರಹ ಪಡಿಸಿದರು.



