ದಾವಣಗೆರೆ: ಅಕ್ರಮವಾಗಿ ಗೋದಾಮಿನಲ್ಲಿ ಸಂಗ್ರಹಿಸಿದ್ದ 89.77 ಕ್ವಿಂಟಾಲ್ ಅಕ್ಕಿ ಹಾಗೂ 6.80 ಕ್ವಿಂಟಾಲ್ ರಾಗಿಯನ್ನು ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ನಡೆಸಲಾಗಿದೆ.
ನಗರದ ನಿಜಲಿಂಗಪ್ಪ ಬಡಾವಣೆ 1ನೇ ಮುಖ್ಯ ರಸ್ತೆಯ ಶೆಡ್ ಒಂದರಲ್ಲಿ ಅಕ್ರಮವಾಗಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪಡಿತರ ಚೀಟಿದಾರರಿಗೆ ನೀಡಲಾದ ಅಕ್ಕಿ, ರಾಗಿ ಸಂಗ್ರಹಿಸಲಾಗಿದೆ ಎಂದು ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ಬಂದಿದೆ. ಈ ಮಾಹಿತಿ ಆಧಾರಿಸಿ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ಅಕ್ಕಿ ಮತ್ತು ರಾಗಿಯನ್ನು ವಶಪಡಿಸಿಕೊಂಡಿದ್ಧಾರೆ.
ನಗರ ಆಹಾರ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಎನ್. ವಿಶ್ವನಾಥಗೌಡ, ಆಹಾರ ನಿರೀಕ್ಷಕರಾದ ಟಿ.ಮಂಜುನಾಥ, ಜೆ.ನಾಗೇಂದ್ರ ಅವರ ತಂಡವು ಬಡಾವಣೆ ಠಾಣೆ ಪೊಲೀಸರೊಂದಿಗೆ ದಾಳಿ ಮಾಡಿ ಅಕ್ರಮ ಅಕ್ಕಿ ಹಾಗೂ ರಾಗಿ ವಶಕ್ಕೆ ಪಡೆಯಲಾಗಿದೆ.



