ದಾವಣಗೆರೆ: ಪ್ರಸಕ್ತ ಸಾಲಿಗೆ ಗಣಿಭಾದಿತ ಪ್ರದೇಶದಲ್ಲಿನ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಜೆರಾಕ್ಸ್ ಯಂತ್ರ ಮತ್ತು ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ (ರೆಟ್ರೋಫಿಟ್ಮೆಂಟ್ ಸಹಿತ) ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿರುತ್ತದೆ. ಗಣಿಭಾದಿತ ಪ್ರದೇಶಗಳ ವಿಕಲಚೇತನರು ಮಾತ್ರ ಆಯಾ ತಾಲ್ಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿಲು ಜಿಲ್ಲಾ ವಿಕಲಚೇತನರ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.



