Connect with us

Dvgsuddi Kannada | online news portal | Kannada news online

ದಾವಣಗೆರೆ: ಪತಿಯಿಂದಲೇ ಪತ್ನಿಯ ಹ*ತ್ಯೆ; ಆರೋಪಿ ಬಂಧನ

crime news davangere

ದಾವಣಗೆರೆ

ದಾವಣಗೆರೆ: ಪತಿಯಿಂದಲೇ ಪತ್ನಿಯ ಹ*ತ್ಯೆ; ಆರೋಪಿ ಬಂಧನ

ದಾವಣಗೆರೆ: ಪತ್ನಿಯ ಶೀಲ ಶಂಕಿಸಿದ ಪತಿ, ಪತ್ನಿಯ ಕುತ್ತಿಗೆ ಕೊಯ್ದು ಹತ್ಯೆ ಮಾಡಿರುವ ಘಟನೆ ಜಗಳೂರು ತಾಲ್ಲೂಕಿನ ಚಿಕ್ಕಮಲ್ಲನಹೊಳೆ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಗ್ರಾಮದ ಬಾಲರಾಜು (40) ಪತ್ನಿ ಜ್ಯೋತಿಯನ್ನು (38) ಕುಡುಗೋಲಿನಿಂದ ಕತ್ತು ಸೀಳಿ ಭೀಕರವಾಗಿ ಕೊ*ಲೆ ಮಾಡಿದ್ದಾನೆ. ಬಾಲರಾಜು ಹಾಗೂ ಜ್ಯೋತಿಗೆ 7 ವರ್ಷದ ಮಗುವಿದ್ದು, ಜ್ಯೋತಿಗೆ ಅನೈತಿಕ ಸಂಬಂಧವಿದೆ ಎಂದು ಬಾಲರಾಜು ಹಲವು ವರ್ಷಗಳಿಂದ ಜಗಳ ನಡೆಯುತ್ತಿತ್ತು. ಈ ವಿಚಾರವಾಗಿ ಇಬ್ಬರೂ ಬೇರೆಬೇರೆ ವಾಸವಾಗಿದ್ದರು. ಆದರೆ, ಒಂದು ವರ್ಷದ ಹಿಂದೆ ಇಬ್ಬರೂ ಮತ್ತೆ ಒಂದೇ
ಮನೆಯಲ್ಲಿ ವಾಸವಾಗಿದ್ದರು.

ರಾತ್ರಿ ವೇಳೆ ಬಾಲರಾಜು ಜ್ಯೋತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಜ್ಯೋತಿಯ ಸಹೋದರಿ ಯಶೋಧಮ್ಮ ಜಗಳೂರು ಠಾಣೆಗೆ ದೂರು ನೀಡಿದ್ದು,
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top