Connect with us

Dvgsuddi Kannada | online news portal | Kannada news online

ದಾವಣಗೆರೆ: ಶಿಕ್ಷಕರ ದಿನಾಚರಣೆ; ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಿಗೆ ಸನ್ಮಾನ

school 1

ದಾವಣಗೆರೆ

ದಾವಣಗೆರೆ: ಶಿಕ್ಷಕರ ದಿನಾಚರಣೆ; ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಿಗೆ ಸನ್ಮಾನ

ದಾವಣಗೆರೆ: ಸೆಪ್ಟೆಂಬರ್ 5 ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 18 ಶಿಕ್ಷಕರಿಗೆ ಗೌರವಿಸಿ ಸನ್ಮಾನಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಕೊಟ್ರೇಶ್ ತಿಳಿಸಿದ್ದಾರೆ.

ಸೆಪ್ಟೆಂಬರ್ 5 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ನಡೆಯುವ ಶಿಕ್ಷಕ ದಿನಾಚರಣೆಯ ಕಾರ್ಯಕ್ರಮದಲ್ಲಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರಾಥಮಿಕ, ಹಿರಿಯ ಶಾಲಾ ವಿಭಾಗದಿಂದ 12 ಮತ್ತು ಪ್ರೌಢಶಾಲಾ ವಿಭಾಗದಿಂದ 6 ಶಿಕ್ಷಕರಿಗೆ ಪ್ರಶಸ್ತಿ ನೀಡಲಾಗುವುದು.

ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರು

ಕಿರಿಯ ಪ್ರಾಥಮಿಕ ಶಾಲಾ ವಿಭಾಗ

  • ಚನ್ನಗಿರಿ ತಾಲ್ಲೂಕಿನ ಸಂತೆ ಮೈದಾನದ ಸರ್ಕಾರಿ ಉ.ಹಿ.ಪ್ರಾಥಮಿಕ ಶಾಲೆಯ ಸ.ಶಿ. ಮೊಹಮ್ಮದ್ ಮುಹೀಬ್ ಉಲ್ಲಾ
  • ದಾವಣಗೆರೆ ಉತ್ತರ ವಲಯ ಹೆಬ್ಬಾಳು ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸ.ಶಿಕ್ಷಕಿ ಗಾಯಿತ್ರಿ ಬಿ. ಐರಣಿ
  • ದಾವಣಗೆರೆ ದಕ್ಷಿಣವಲಯದ ಕಾವೇರಮ್ಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ.ಶಿ.ಅಕ್ಕಮಹಾದೇವಿ.ಕೆ.ಎಂ
  • ಹರಿಹರ ತಾಲ್ಲೂಕಿನ ಮಲೆಬೆನ್ನೂರು ಗ್ರಾಮದ ಶ್ರೀಮಾರುತಿ ಅನುದಾನಿತ ಹಿರಿಯ ಪಾಥಮಿಕ ಶಾಲೆಯ ಸ.ಶಿ.ಪರಮೇಶ್ವರಪ್ಪ
  • ಹೊನ್ನಾಳಿ ತಾಲ್ಲೂಕಿನ ಸದಾಶಿವಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸ.ಶಿ.ಮಲ್ಲಿಕಾರ್ಜುನ್ ಬಡಿಗೇರ್
  • ಜಗಳೂರು ತಾಲ್ಲೂಕಿನ ಗುರುಸಿದ್ದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ.ಶಿ.ಪುಪ್ಪಾಲತಾ.ಎಸ್.ಎನ್

ಹಿರಿಯ ಪ್ರಾಥಮಿಕ ಶಾಲಾ ವಿಭಾಗ

  • ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಸ.ಶಿ.ಮಂಜುನಾಥ ಕೆ.ಬಿ
  • ದಾವಣಗೆರೆ ಉತ್ತರ ವಲಯದ ಹಳೇ ಊರು ದುಗ್ಗಮ್ಮನ ಪೇಟೆಯ ಸ.ಹಿ.ಪ್ರಾ ಶಾಲೆಯ ಸಹ ಶಿಕ್ಷಕ ಹನುಮಂತ ನಾಯ್ಕ
  • ದಾವಣಗೆರೆ ದಕ್ಷಿಣ ವಲಯದ ಕೋಲ್ಕುಂಟೆ ಸ.ಹಿ.ಪ್ರಾ ಶಾಲೆಯ ವೀರೇಶ್
  • ಹರಿಹರ ತಾಲ್ಲೂಕಿನ ಕೊಕ್ಕನೂರು ಸ.ಹಿ.ಪ್ರಾ ಶಾಲೆಯ ಸಹ ಶಿಕ್ಷಕ ಶ್ರೀಕಾಂತಚಾರಿ ಜೆ.ಜಿ
  • ಹೊನ್ನಾಳಿ ತಾಲ್ಲೂಕಿನ ಕಮ್ಮಾರಗಟ್ಟೆ ಗ್ರಾಮದ ಸ.ಹಿ.ಪ್ರಾ ಶಾಲೆಯ ಸಹ ಶಿಕ್ಷಕ ಕುಮಾರ್ ನಾಯ್ಕ್
  • ಜಗಳೂರು ತಾಲ್ಲೂಕಿನ ತೋರಣಗಟ್ಟೆ ಸ.ಹಿ.ಪ್ರಾ ಶಾಲೆಯ ಸಹಶಿಕ್ಷಕ ರಂಗಪ್ಪ ವೆಂಕಪ್ಪನವರ್ ಇವರು ಆಯ್ಕೆ ಹೊಂದಿದ್ದಾರೆ.

ಪ್ರೌಢಶಾಲಾ ವಿಭಾಗ

  • ಚನ್ನಗಿರಿ ತಾಲ್ಲೂಕಿನ ನಲ್ಲೂರು ಗ್ರಾಮದ ಸರ್ಕಾರಿ ಬಾಲಿಕ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಕೃಷ್ಣಮೂರ್ತಿ.ಹೆಚ್
  • ದಾವಣಗೆರೆ ಉತ್ತರ ವಲಯದ ಸರ್ಕಾರಿ ಪ್ರೌಢಶಾಲೆಯ ಸ.ಶಿ ವೀರೇಶ್.ಪಿ
  • ದಾವಣಗೆರೆ ದಕ್ಷಿಣ ವಲಯದ ಶ್ರೀ ತರಳಬಾಳು ಜಗದ್ಗುರು ಪ್ರೌಢಶಾಲೆಯ ಅನುಭವ ಮಂಟಪದ ಶರತ್ ಆರ್
  • ಹರಿಹರ ತಾಲ್ಲೂಕಿನ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸ.ಶಿ ಸಂತೋಷ ನೂಲಗೇರಿ
  • ಹೊನ್ನಾಳಿ ತಾಲ್ಲೂಕಿ ಹಿರೇಗೋಣಿಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸ.ಶಿ ವಿಜಯ್ ಸೊಲ್ಲಾಪುರ
  • ಜಗಳೂರು ತಾಲ್ಲೂಕಿನ ಗೌರಿಪುರದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕಕರಿಬಸಪ್ಪ ಎಚ್. ಎಂ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top