Connect with us

Dvgsuddi Kannada | online news portal | Kannada news online

ದಾವಣಗೆರೆ: ಮನೆಗಳ್ಳತನ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳರ ಬಂಧನ; ಬರೋಬ್ಬರಿ 15.37‌ ಲಕ್ಷ ಮೌಲ್ಯದ ಸ್ವತ್ತು ವಶ

davangere police dvg 2

ದಾವಣಗೆರೆ

ದಾವಣಗೆರೆ: ಮನೆಗಳ್ಳತನ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳರ ಬಂಧನ; ಬರೋಬ್ಬರಿ 15.37‌ ಲಕ್ಷ ಮೌಲ್ಯದ ಸ್ವತ್ತು ವಶ

ದಾವಣಗೆರೆ: ವಿದ್ಯಾ‌ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗಳ್ಳತನ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿಗಳಿಂದ 15.37‌ ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ ಪಡೆಯಲಾಗಿದೆ.

ಮನೆಯ ಬಾಗಿಲ ಇಂಟರ್ ಲಾಕ್ ಮುರಿದು ಕಳ್ಳತನ

ರಂಗನಾಥ್ ಎಂಬುವವರು ವಿದ್ಯಾನಗರ ಠಾಣೆಗೆ ಹಾಜರಾಗಿ ದೂರು ನೀಡಿದ್ದು, ದಿನಾಂಕ 30.08.2025 ರಂದು ಮಧ್ಯಾಹ್ನ 2.00 ಗಂಟೆ ಸಮಯದಲ್ಲಿ ವಿನಾಯಕ ಬಡಾವಣೆಯ ತಮ್ಮ ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋಗಿದ್ದರು. ನಂತರ ದಿ:31.08.2025 ರಂದು ರಾತ್ರಿ ಸುಮಾರು 9.00 ಗಂಟೆಗೆ ಬಂದು ನೋಡಿದಾಗ ಮನೆಯ ಬಾಗಿಲ ಇಂಟರ್ ಲಾಕ್ ಬೀಗ ಮುರಿದಿದ್ದು ಗಾಡ್ರೇಜ್ ಬೀರುವಿನಲ್ಲಿ ಇಟ್ಟಿದ್ದ ಬಂಗಾರದ ಆಭರಣಗಳನ್ನು ಬೆಳ್ಳಿ ಸಾಮಾನುಗಳನ್ನು ಹಾಗು ನಗದು ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

ರಾಜಸ್ಥಾನ ಮೂಕದ ಕಳ್ಳರ ಬಂಧನ

ಸದರಿ ಪ್ರಕರಣದಲ್ಲಿ ಆರೋಪಿತರನ್ನು ಪತ್ತೆ ಮಾಡಲು ಎಸ್ಪಿ ಉಮಾ ಪ್ರಶಾಂತ್ ,‌ ಎಎಸ್ಪಿ ಪರಮೇಶ್ವರ ಹೆಗಡೆ ಮ, ಡಿವೈಎಸ್ಪಿ ಶರಣ ಬಸವೇಶ್ವರ ಬಿ ಮಾರ್ಗದರ್ಶನದಲ್ಲಿ ವಿದ್ಯಾನಗರ ಠಾಣೆ ನಿರೀಕ್ಷಕಿ ಶಿಲ್ಪಾ ವೈ.ಎಸ್ ನೇತೃತ್ವದಲ್ಲಿ ಅಧಿಕಾರಿ ಸಿಬ್ಬಂದಿಗಳನ್ನು ಒಳಗೊಂಡ ತಂಡವನ್ನು ರಚನೆ ಮಾಡಲಾಗಿತ್ತು.‌ ಈ ತಂಡವು ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ರಾಜ್ಯದ ಸೂರತ್ ಸಿಟಿ ಸಾರೋಲಿ ಪೊಲೀಸ್ ಠಾಣೆಯ ಪೊಲೀಸರ ಸಹಕಾರದಿಂದ ದಿ:04.09.2025 ರಂದು ಪ್ರಕರಣದಲ್ಲಿ ಮೂರು ಜನ ಆರೋಪಿತರಾದ

  1. ಎ-1 ಶ್ಯಾಮ್ ಸಿಂಗ್ (28)/ಚಾಲಕ ಕೆಲಸ ವಾಸ ಕಾಣೆಚಾ ಗ್ರಾಮ ರೈಲ್ರಾ ಪಂಚಾಯತ್ ಸೆದ್ದಾ ಸೆದ್ದಾ ಪೊಲೀಸ್ ಠಾಣಾ ರಾಯಪೂರ್ ತೇಹಸಿಲ್ ಬಿಯಾವರ್ ಜಿಲ್ಲೆ ರಾಜಸ್ಥಾನ ರಾಜ್ಯ
  2. ಎ2- ಕವರ್ ಪಾಲ್, (24) , ಬಟ್ಟೆ ಅಂಗಡಿಯಲ್ಲಿ ವ್ಯಾಪಾರ ವಾಸ ಕಾಬ್ರಾ ಗ್ರಾಮ ಜವಜಾ ಠಾಣಾ ಬಿಯಾವರ್ ತೆಹಸಿಲ್ ಹಾಗು ಜಿಲ್ಲೆ ರಾಜಸ್ಥಾನ ರಾಜ್ಯ
  3. ಎ3- ಪ್ರತಾಪ್ ಸಿಂಗ್ (33) , ಚಾಲಕ ಕೆಲಸ ವಾಸ ಗೋಹಾನಾ ಗ್ರಾಮ ಸರ್ಕಾರಿ ಶಾಲೆ ಹತ್ತಿರ ಜವಜಾ ಠಾಣಾ ಬಿಯಾವರ್ ಜಿಲ್ಲೆ ರಾಜಸ್ಥಾನ ರಾಜ್ಯ ರವರುಗಳನ್ನು ಬಂಧಿಸಿದ್ದಾರೆ.

ವಶಕ್ಕೆ ಪಡೆದ ಸ್ವತ್ತಿನ ವಿವರ

  • ಆರೋಪಿತರಿಂದ 12,97,200/- ರೂ ಬೆಲೆಯ 162.150 ಗ್ರಾಂ ತೂಕದ ಬಂಗಾರದ ಆಭರಣಗಳು
  • 1,08,000/- ರೂ ಬೆಲೆಯ 1350 ಗ್ರಾಂ ತೂಕದ ಬೆಳ್ಳಿ ಸಾಮಾನುಗಳು
  • 95,600/- ರೂ ನಗದು ಹಣ
  • 34,000/- ರೂ ಬೆಲೆಯ ಒಟ್ಟು 6 ಮೊಬೈಲ್ ಪೋನಗಳು
  • 3000/-ರೂ ಬೆಲೆಯ ಎರಡು ವಾಚ್ ಗಳು

ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆರೋಪಿತರು ನ್ಯಾಯಾಂಗ ಬಂಧನದಲ್ಲಿ ಇರುತ್ತಾರೆ.

ಆರೋಪಿತರ ಹಿನ್ನೆಲೆ

ದಾವಣಗೆರೆ ಜಿಲ್ಲೆಯ ಹರಿಹರ ನಗರ ಠಾಣೆ, ಧಾರವಾಡ, ತುಮಕೂರು ಬಡಾವಣೆ, ತಿಪಟೂರು, ಮಧ್ಯಪ್ರದೇಶದ ಭೂಪಾಲ್ ಸೇರಿದಂತೆ ವಿವಿಧ ಕಡೆ ಆರೋಪಿತರು 06 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದು ಬಂದಿರುತ್ತದೆ. ಸದರಿ ಪತ್ತೆ ಕಾರ್ಯದಲ್ಲಿ ಭಾಗಿಯಾದ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top