ದಾವಣಗೆರೆ: ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ನಗರದ ಹಳೇ ಪ್ರವಾಸಿ ಮಂದಿರದಲ್ಲಿ ಸೆ.10 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಸಾರ್ವಜನಿಕರ ಅಹವಾಲು ಸ್ವೀಕಾರಿಸುವರು.
ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿರುವ ಬಗ್ಗೆ ಅಧಿಕಾರಿಗಳು, ಸಿಬ್ಬಂದಿಗಳು ಆದಾಯ ಮೀರಿ ಆಸ್ತಿ ಮಾಡಿರುವ ದೂರುಗಳಿದ್ದಲ್ಲಿ ಸಲ್ಲಿಸಬಹುದೆಂದು ತಿಳಿಸಿದ್ದಾರೆ.



