Connect with us

Dvgsuddi Kannada | online news portal | Kannada news online

ದಾವಣಗೆರೆ: ಸಾವಿನಲ್ಲೂ ಸಾರ್ಥಕತೆ ಮೆರೆದ ಗಾಯತ್ರಮ್ಮ; ಅಂಗಾಂಗ ದಾನ

dana

ದಾವಣಗೆರೆ

ದಾವಣಗೆರೆ: ಸಾವಿನಲ್ಲೂ ಸಾರ್ಥಕತೆ ಮೆರೆದ ಗಾಯತ್ರಮ್ಮ; ಅಂಗಾಂಗ ದಾನ

ದಾವಣಗೆರೆ: ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ತೆಗ್ಗಿನಹಳ್ಳಿ ಗ್ರಾಮದ ನಿವಾಸಿ ದಿವಂಗತ ಬೀರಪ್ಪ ಅವರ ಪತ್ನಿ ಗಾಯತ್ರಮ್ಮ ಮೆದುಳು ನಿಷ್ಕ್ರಿಯೆಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೆಪ್ಟೆಂಬರ್ 12 ರಂದು ಗಾಯತ್ರಮ್ಮ ಮೃತರಾದರು. ಮೃತರ ಚಲನೆ ಇರುವ ದೇಹದ ಉಳಿದ ಭಾಗದ ಅಂಗಾಂಗಳಾದ ಹೃದಯ, ಕಿಡ್ನಿ, ಲಿವರ್, ಶ್ವಾಸಕೋಶ ಮತ್ತು ಎರಡು ಕಣ್ಣಿನ ಪೊರೆಯನ್ನು ಬೆಂಗಳೂರು ಹೆಚ್ ಎಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ತಾಯಿಯ ನೆನಪಿಗಾಗಿ ಬೇರೆಯವರ ಜೀವ ಉಳಿಸಲು ಅಂಗಾಂಗ ದಾನ ಮಾಡಲು ಅವರ ಮಕ್ಕಳಾದ ಸಂತೋಷ, ಸಂಗೀತ, ಚೈತ್ರಾ, ಪ್ರಶಾಂತ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಅಂಗಾಂಗ ದಾನವು ನಿಯಮಾವಳಿ ರೀತ್ಯಾ ನಡೆಯಲಿದೆ. ಇದೇ ರೀತಿ ಮೃತರಾದವರ ಅಂಗಾಂಗ ದಾನ ಮಾಡುವ ಮೂಲಕ ಜೀವ ಉಳಿಸಲು ಮುಂದಾಗಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top