Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

crime news 1
ದಾವಣಗೆರೆ: ಮನೆ ಮುಂದೆ ಟ್ರ್ಯಾಕ್ಟರ್ ನಿಲ್ಲಿಸುವ ವಿಚಾರಕ್ಕೆ ಎರಡು ಕುಟುಂಬ ನಡುವೆ ಜಗಳ ; ಪ್ರಕರಣ ದಾಖಲು
exam
ದಾವಣಗೆರೆ: ನಾಳೆ ಸ್ಪರ್ಧಾತ್ಮಕ ಪರೀಕ್ಷೆ; ಕೇಂದ್ರಗಳ ಸುತ್ತಮುತ್ತ 200 ಮೀಟರ್ ನಿಷೇಧ; ಡಿಸಿ ಆದೇಶ
Bescom
ದಾವಣಗೆರೆ: ಈ ಏರಿಯಾದಲ್ಲಿ ಇಂದು ಬೆ‌.10ರಿಂದ ಸಂ.4 ಗಂಟೆ ವರೆಗೆ ವಿದ್ಯುತ್ ‌ವ್ಯತ್ಯಯ
astrology today 1
ಶನಿವಾರದ ರಾಶಿ ಭವಿಷ್ಯ 24 ಜನವರಿ 2026
grama Panchayti 4
ದಾವಣಗೆರೆ: ಗ್ರಾಮ ಪಂಚಾಯತಿಗಳೇ ಫ್ರಂಟ್ ಆಫೀಸ್ ರೀತಿ ಕಾರ್ಯ‌ ನಿರ್ವಹಿಸಬೇಕು; ಯೋಜನೆ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ್

Socials

ದಾವಣಗೆರೆ

ಪಾಲಿಕೆ ಇಂಜಿನಿಯರ್ ಸೋಗಿನಲ್ಲಿ 6 ಲಕ್ಷ ಮೌಲ್ಯದ ಚಿನ್ನ ದೋಚಿದ್ದ ಆರೋಪಿ ಸೆರೆ: ದಾವಣಗೆರೆ ಪೊಲೀಸರ ಮಹತ್ವದ ಕಾರ್ಯಾಚರಣೆ

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: September 11, 2019
Share
2 Min Read
SHARE

ವಿಜಿಸುದ್ದಿ.ಕಾಂ, ದಾವಣಗೆರೆ: ಮಹಾನಗರ ಪಾಲಿಕೆಯ ಯುಜಿಡಿ ಇಂಜಿನಿಯರ್ ಸೋಗಿನಲ್ಲಿ 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ದಾವಣಗೆರೆ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಮಹಾನಗರ ಪಾಲಿಕೆಯ ಯುಜಿಡಿ ಇಂಜಿನಿಯರ್‌ಗಳು ಎಂದು ಹೇಳಿಕೊಂಡು ಪ್ರತಿಷ್ಟಿತ ಬಡಾವಣೆಯಲ್ಲಿ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಬಂಧಿತನಿಂದ ೬ ಲಕ್ಷ ಮೌಲ್ಯದ ಬೆಲೆ ಬಾಳುವ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.

ನಾವು, ಪಾಲಿಕೆಯ ಯುಜಿಡಿ ಇಂಜಿನಿಯರ್, ನಿಮ್ಮ ಮನೆಯ ಪೈಪ್ ಲೈನ್ ಅನ್ನು ಯುಜಿಡಿ ಪೈಪ್‌ಗೆ ಲಿಂಕ್ ಮಾಡಬೇಕಿದೆ. ನಿಮ್ಮ ಮನೆಯ ಬಾತ್ ರೂಮ್ ತೋರಿಸಿ ಎಂದು ಕೇಳಿಕೊಳ್ಳುತ್ತಿದ್ದರು. ಬಾತ್ ರೂಮ್ ತೋರಿಸಿದ ನಂತರ ಅಳತೆ ಹಿಡಿದಂತೆ ಮಾಡಿ ಮಾಲೀಕರ ಗಮನ ಬೇರೆಡೆ ಸೆಳೆದ ಮನೆಯಲ್ಲಿದ್ದ ಚಿನ್ನಾಭರಣ ದೋಚುತ್ತಿದ್ದರು ಎಂದು ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯಪ್ಪ ಹೇಳಿದರು.

ಸಿಪಿಐ ತಿಪ್ಪಣ್ಣ ಅವರ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿತ್ತು. ಈ ತಂಡವು ಭದ್ರಾವತಿ ನಿವಾಸಿ ತರಗಾರ ಕೆಲಸ ಮಾಡುತ್ತಿದ್ದ ೨೮ ವರ್ಷದ ಎಚ್. ವೇಣುಗೋಪಾಲ್ ನನ್ನು ಭದ್ರಾವತಿಯಲ್ಲಿ ವಶಕ್ಕೆ ಪಡೆಯಲಾಗಿದೆ. ಇನ್ನಿಬ್ಬರು ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ. ಬಂಧಿತ ಆರೋಪಿಯಿಂದ 6 ಲಕ್ಷ ಮೌಲ್ಯದ ಬೆಲೆ ಬಾಳುವ 174 ಗ್ರಾಂ ಚಿನ್ನಾಭರಣವನ್ನು ವಶಶಕ್ಕೆ ಪಡೆಯಲಾಗಿದೆ ಎಂದರು.

Related News

crime news 1
ದಾವಣಗೆರೆ: ಮನೆ ಮುಂದೆ ಟ್ರ್ಯಾಕ್ಟರ್ ನಿಲ್ಲಿಸುವ ವಿಚಾರಕ್ಕೆ ಎರಡು ಕುಟುಂಬ ನಡುವೆ ಜಗಳ ; ಪ್ರಕರಣ ದಾಖಲು
January 24, 2026
exam
ದಾವಣಗೆರೆ: ನಾಳೆ ಸ್ಪರ್ಧಾತ್ಮಕ ಪರೀಕ್ಷೆ; ಕೇಂದ್ರಗಳ ಸುತ್ತಮುತ್ತ 200 ಮೀಟರ್ ನಿಷೇಧ; ಡಿಸಿ ಆದೇಶ
January 24, 2026
Bescom
ದಾವಣಗೆರೆ: ಈ ಏರಿಯಾದಲ್ಲಿ ಇಂದು ಬೆ‌.10ರಿಂದ ಸಂ.4 ಗಂಟೆ ವರೆಗೆ ವಿದ್ಯುತ್ ‌ವ್ಯತ್ಯಯ
January 24, 2026

IMG 20190911 183324

ನಗರದ ಶಿವಕುಮಾರ ಸ್ವಾಮಿ ಬಡಾವಣೆಯ ಎಸ್. ಸುಧಾ, ಸುರೇಶ್ ಎಂಬ ದಂಪತಿಗಳ ಮನೆಯಲ್ಲಿ ಕಳೆದ ತಿಂಗಳು ೮ ರಂದು ಕಳ್ಳತನವಾಗಿತ್ತು. ಮಹಾನಗರ ಪಾಲಿಕೆಯ ಯುಜಿಡಿ ಇಂಜಿನಿಯರ್‌ಗಳು ಎಂದು ಹೇಳಿಕೊಂಡು ಬಂದಿದ್ದ ಮೂವರು ಡ್ರೈನೇಜ್ ಪೈಪ್ ಲೈನ್ ಪೇರಿ ನೆಪದಲ್ಲಿ ಮನೆಯ ಒಳಗಡೆ ಬಂದಿದ್ದರು. ಬಾತ್ ರೂಮ್‌ನ್ನು ಟೇಪ್ ನಲ್ಲಿ ಅಳತೆ ಹಿಡಿದು, ಮನೆ ಮಾಲೀಕರನ್ನು ಮೊದಲ ಮಹಡಿಗೆ ಕರೆದುಕೊಂಡು ಹೋಗಿ ಗಮನ ಬೇರೆಡೆ ಸೆಳೆದು ಬೆಳ್ಳಿ, ಬಂಗಾರದ ಒಡವೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು. ಬಗ್ಗೆ ಕೆಟಿಜಿ ನಗರ ಪೊಲೀಸ್ ಠಾಣೆಯಲ್ಲಿ ಎಸ್. ಸುಧಾ ಮತ್ತು ಸುರೇಶ್ ದಂಪತಿಗಳು ದೂರು ದಾಖಲಿಸಿದ್ದರು.

Related News

astrology today 1
ಶನಿವಾರದ ರಾಶಿ ಭವಿಷ್ಯ 24 ಜನವರಿ 2026
January 23, 2026
grama Panchayti 4
ದಾವಣಗೆರೆ: ಗ್ರಾಮ ಪಂಚಾಯತಿಗಳೇ ಫ್ರಂಟ್ ಆಫೀಸ್ ರೀತಿ ಕಾರ್ಯ‌ ನಿರ್ವಹಿಸಬೇಕು; ಯೋಜನೆ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ್
January 23, 2026
school
ದಾವಣಗೆರೆ: ಶ್ರೀ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆ ಮಾನ್ಯತೆ ರದ್ದು; ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ
January 23, 2026

ಈ ದೂರಿನ ಅನ್ವಯ ಕಳ್ಳ ಭೇಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯಪ್ಪ, ಹೆಚ್ಚುವರಿ ವರಿಷ್ಠಾಧಿಕಾರಿ ರಾಜೀವ್, ಉಪ ವರಿಷ್ಠಾಧಿಕಾರಿ ಎಂ.ಕೆ ಗಂಗಲ್ ಮಾರ್ಗದರ್ಶನದಲ್ಲಿ ದಕ್ಷಿಣ ವೃತ್ತದ ಸಿಪಿಐ ತಿಮ್ಮಣ್ಣ, ಕೆಟಿಜಿ ನಗರ ಪಿಎಸ್‌ಐ ಎ.ಕೆ ಚಂದ್ಪಪ್ಪ, ಪಿಎಸ್‌ಐ ನಾಗರಾಜ್ ಹಾಗೂ ಸಿಬ್ಬಂದಿಗಳಾದ ತಿಪ್ಪೇಸ್ವಾಮಿ, ಕೆ.ಎಲ್. ಲೋಕ್ಯಾನಾಯ್ಕ್, ಚಂದ್ರಪ್ಪ, ಯೋಗೇಶ್ ನಾಯಕ್, ಶಂಕರ್ ಜಾದವ್, ರಾಜು, ರಾಜಪ್ಪ, ಉಮೇಶ್ ಹಾಗೂ ರಾಮಚಂದ್ಪಪ್ಪ ಸಹಾಯದಿಂದ ಆರೋಪಿಗಳನ್ನು ಪತ್ತೆ ಮಾಡಿದ್ದಾರೆ.

ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 9844460336, 7483892205

TAGGED:DavanagerefeaturedPoliceದಾವಣಗೆರೆ ಪೊಲೀಸರ ಕಾರ್ಯಾಚರಣೆ
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ಒಳ್ಳೆಯ ಕೆಲಸದಿಂದ ಗೌರವವೋ ಹೊರತು, ವಯಸ್ಸಿನಿಂದಲ್ಲ: ಶ್ರೀ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ
Next Article ಸರ್ವೇ ವರದಿ ಆಧಾರಿಸಿ ಕೇಂದ್ರ ಸರ್ಕಾರ ನೆರವು ನೀಡಲಿದೆ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

ಪಿ.ವಿ. ಸಿಂಧೂ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್

ಸರ್ಕಾರಿ ನೇಮಕಾತಿ: ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ; ಸರ್ಕಾರದ ಮಹತ್ವದ ನಿರ್ಧಾರ

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!