ದಾವಣಗೆರೆ | ಪಡಿತರ ಅಕ್ರಮ ಸಾಗಟ, ತೂಕದಲ್ಲಿ ವಂಚನೆ | 12 ಪ್ರಕರಣ ದಾಖಲು | ಇನ್ಮುಂದೆ ಬೆಳಿಗ್ಗೆ 6ರಿಂದಲೇ ಪಡಿತರ ವಿತರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ‘ಜಿಲ್ಲೆಯಲ್ಲಿ ಅನ್ನಭಾಗ್ಯ  (annabhagya) ಯೋಜನೆಯ ಪಡಿತರ ಅಕ್ರಮ ಸಾಗಟ ಹಾಗೂ ತೂಕದಲ್ಲಿ ವಂಚನೆ ಮಾಡಿದ 12 ನ್ಯಾಯಬೆಲೆ ಅಂಗಡಿ ವಿರುದ್ಧ ಪ್ರಕರಣ ದಾಖಲಾಗಿದೆ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.

12 ನ್ಯಾಯಬೆಲೆ ಅಂಗಡಿಗಳನ್ನು ಅಮಾನತು

ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. ಫಲಾನುಭವಿಗಳ ಬಳಿ ಹಣ ವಸೂಲಿ ಸೇರಿದಂತೆ ಹಲವು ಲೋಪದೋಷಗಳನ್ನು ಗಮನಿಸಿ 12 ನ್ಯಾಯಬೆಲೆ ಅಂಗಡಿಗಳನ್ನು ಅಮಾನತು ಮಾಡಲಾಗಿದೆ ಎಂದರು.

ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಬೆಳಿಗ್ಗೆ 6 ರಿಂದ ಸಂಜೆ 8ರವರೆಗೆ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆ ಮಾಡಬೇಕು’ ಎಂದು

»ಗಿತ್ತೆ ಮಾಧವ ವಿಠಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ

450 ಕ್ವಿಂ. ಅಕ್ಕಿ, 150 ಕ್ವಿಂ. ರಾಗಿ ವಶ

ಅಕ್ರಮವಾಗಿ ದಾಸ್ತಾನು ಮಾಡಿದ್ದ 450 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ 150 ಕ್ವಿಂಟಾಲ್ ರಾಗಿ ವಶಪಡಿಸಿಕೊಳ್ಳಲಾಗಿದೆ. 2023ರಿಂದ ಈವರೆಗೆ ಜಿಲ್ಲೆಯಲ್ಲಿ 3312 ಫಲಾನುಭವಿಗಳು ಮರಣ ಹೊಂದಿದ್ದಾರೆ. ಇದರಲ್ಲಿ 215 ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಯಿಂದ 25.60 ಲಕ್ಷವನ್ನು ಸರ್ಕಾರಕ್ಕೆ ಮರುಪಾವತಿಸಲಾಗಿದೆ ಎಂದು ತಿಳಿಸಿದರು.

ಇನ್ಮುಂದೆ ಬೆಳಿಗ್ಗೆ 6 ರಿಂದ ಪಡಿತರ ವಿತರಣೆ

ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಬೆಳಿಗ್ಗೆ 6 ರಿಂದ ಸಂಜೆ 8ರವರೆಗೆ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲ ರಾವ್‌ ಸೂಚನೆ ನೀಡಿದರು.

‘ಯುವನಿಧಿ ಯೋಜನೆ ಬಗ್ಗೆ  ಶಾಲಾ- ಕಾಲೇಜುಗಳಲ್ಲಿ ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಅಭಿಯಾನ ಹಮ್ಮಿಕೊಂಡು ಅರಿವು ಮೂಡಿಬೇಕು ಎಂದು ತಿಳಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *