ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ..?
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಕೋಲಾರ ಜಿಲ್ಲೆಯಲ್ಲ ಗಂಟೆಗೆ 30 ಕಿ.ಮೀ ನಿಂದ 40 ಕಿ.ಮೀ.ಗಾಳಿಯೊಂದಿಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಉತ್ತರ ಒಳನಾಡಿನ ಧಾರವಾಡ, ಗದಗ ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು ಬೆಳಗಾವಿ, ಬಾಗಲಕೋಟೆ , ಬೀದರ್, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಕಲಬುರಗಿ, ಕೊಪ್ಪಳದಲ್ಲಿ ಒಣಹವೆ ಇರುವ ಸಾಧ್ಯತೆಯಿದೆ.



