ಮುಂಬೈ: ಭಾರತ ಕ್ರಿಕೆಟ್ ತಂಡದ ರಾಷ್ಟ್ರೀಯ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ಮಾಜಿ ಸ್ಪಿನ್ನರ್, ಕನ್ನಡಿಗ ಸುನೀಲ್ ಜೋಶಿ ಅವರನ್ನು ಬಿಸಿಸಿಐ ನೇಮಕ ಮಾಡಿದೆ.

ಭಾರತ ತಂಡದ ಮಾಜಿ ಆಟಗಾರರಾದ ಮದನ್ ಲಾಲ್, ಆರ್.ಪಿ.ಸಿಂಗ್ ಮತ್ತು ಸುಲಕ್ಷಣಾ ನಾಯಕ್ ಅವರನ್ನು ಒಳಗೊಂಡ ರಾಷ್ಟ್ರೀಯ ಆಯ್ಕೆ ಸಮಿತಿ ಸಭೆ ಸೇರಿ ಸುನೀಲ್ ಜೋಶಿಯವರನ್ನು ಆಯ್ಕೆ ಮಾಡಿದೆ. ಆಯ್ಕೆ ಸಮಿತಿ ಮುಖ್ಯಸ್ಥರಾದ ಎಂ.ಎಸ್.ಕೆ. ಪ್ರಸಾದ್ ಕ್ರಿಕೆಟ್ ಅವರಿಂದ ತೆರವಾದ ಸ್ಥಾನವನ್ನು ಕನ್ನಡಿಗ ಸುನೀಲ್ ಜೋಶಿ ನಿರ್ವಹಿಸಲಿದ್ದಾರೆ.




