ದಾವಣಗೆರೆ: ಅಪಘಾತ‌ದಲ್ಲಿ ಮೃತ ಸರ್ಕಾರಿ ನೌಕರ ಕುಟುಂಬಕ್ಕೆ 1 ಕೋಟಿ ವಿಮೆ ಪರಿಹಾರ ಚೆಕ್ ವಿತರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಎಕ್ಕೆಗೊಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೆ.ಬಿ.ತಿಪ್ಪಣ್ಣ ಅಪಘಾತದಲ್ಲಿ ಮೃತರಾದಗಿದ್ದು, ಕೆನರಾ ಬ್ಯಾಂಕ್ ಸಹಯೋಗದಲ್ಲಿ ಅವರ ಅವಲಂಬಿತ ಕುಟುಂಬಕ್ಕೆ ಅಪಘಾತ ವಿಮೆ ಪಾಲಿಸಿಯಡಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರೂ.1 ಕೋಟಿ ಪರಿಹಾರ ಮೊತ್ತ ನೀಡಲಾಯಿತು.

ಸರ್ಕಾರಿ ನೌಕರ ವೇತನ ಪ್ಯಾಕೇಜ್ ಖಾತೆ ಮಾಡಿಕೊಳ್ಳಿ

ಈ ವೇಳೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಪರಿಹಾರ ಚೆಕ್ ವಿತರಿಸಿ ಮಾತನಾಡಿ, ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅವುಗಳನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡೆದುಕೊಳ್ಳುತ್ತಿಲ್ಲ. ಕಷ್ಟದ ಸಂದರ್ಭಗಳಲ್ಲಿ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತವೆ. ಆದ್ದರಿಂದ ಪ್ರತಿಯೊಬ್ಬ ಸರ್ಕಾರಿ ನೌಕರ ವೇತನ ಪ್ಯಾಕೇಜ್ ಖಾತೆ ಮಾಡಿಕೊಳ್ಳಬೇಕು.

ಯಾವುದೇ ಒಬ್ಬ ವ್ಯಕ್ತಿ ಆಕಸ್ಮಿಕವಾಗಿ ಮರಣ ಹೊಂದಿದಲ್ಲಿ ಅಪಘಾತ ಅಥವಾ ವಿವಿಧ ರೀತಿಯ ವೈಯಕ್ತಿಕ ಅಪಘಾತ ಹಾಗೂ ವೈಮಾನಿಕ ಅಪಘಾತ ವಿಮೆ ಸೇವೆಗಳಡಿ ರೂ.50 ಲಕ್ಷದಿಂದ ರೂ.1 ಕೋಟಿ ವರೆಗೆ ಪರಿಹಾರವನ್ನು ಅವಲಂಬಿತ ಕುಟುಂಬಗಳಿಗೆ ನೀಡಲಾಗುತ್ತದೆ.

ವಿಮೆ ಯೋಜನೆ ಸದುಪಯೋಗ ಪಡೆದುಕೊಳ್ಳಿ

ಈ ಯೋಜನೆಯೂ ಕೇವಲ ಸರ್ಕಾರಿ ನೌಕರರಿಗೆ ಅಲ್ಲದೇ ಅರೆ ಸರ್ಕಾರಿ ನೌಕರರಿಗೂ ಸಹ ವಿವಿಧ ಪ್ಯಾಕೇಜ್‍ಗಳಲ್ಲಿ ಸೇವೆ ಲಭ್ಯವಿದೆ. ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಅದಲ್ಲದೇ ಕೇಂದ್ರ ಸರ್ಕಾರವೂ ಸಹ ಪ್ರಧಾನ ಮಂತ್ರಿ ಭೀಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಯೋಜನೆ ಜಾರಿ ಮಾಡಿದೆ. ಜೀವ ವಿಮಾ ನೋಂದಣಿಯೊಂದಿಗೆ ವಾರ್ಷಿಕ ರೂ.430 ಪಾವತಿಸಿದಲ್ಲಿ ರೂ.1 ಲಕ್ಷದಿಂದ 5 ಲಕ್ಷದವರೆಗೆ ವಿಮೆ ಪಾವತಿ ಮಾಡಲಾಗುತ್ತದೆ. ಪ್ರಧಾನ ಮಂತ್ರಿ ಸುರಕ್ಷಾ ಯೋಜನೆ ಜಾರಿ ಮಾಡಿದೆ. ಆದ್ದರಿಂದ ಕಷ್ಟದ ಸುಳಿಗೆ ಸಿಲುಕಿಕೊಳ್ಳುವ ಬದಲಾಗಿ. ಇಂತಹ ಯೋಜನೆಗಳ ನೋಂದಣಿ ಮಾಡಿಸಿಕೊಳುವ ಮೂಲಕ ಭವಿಷ್ಯದಲ್ಲಿ ಎದುರಾಗುವ ಸಂಕಷ್ಟಗಳಿಂದ ಮುಕ್ತರಾಗಿ ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ಕೆ.ಎಸ್.ಬಸವಂತಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪಡದಯ್ಯ ಹಿರೇಮಠ್, ಡಿಜಿಎಂ ತನ್ಮಯ್ ದಾಸ್, ಡಿಡಿಪಿಐ ಕೊಟ್ರೇಶ್ ಸೇರಿದಂತೆ ಮತ್ತಿತರರು ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *