ಮುಗಿಯದ ದಾವಣಗೆರೆ ಬಿಜೆಪಿ ಬಣ ರಾಜಕೀಯ; ಸಿದ್ದೇಶ್ವರ ನೇತೃತ್ವದಲ್ಲಿ ಮತ್ತೆ ಸಭೆ; ರೇಣುಕಾಚಾರ್ಯ, ಜಿಲ್ಲಾ ಘಟಕದ ಅಧ್ಯಕ್ಷ ವಿರುದ್ಧ ಶಿಸ್ತು ಕ್ರಮಕ್ಕೆ ಪಟ್ಟು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ಲೋಕಸಭಾ ಸೋಲಿನ ಬಳಿಕ ಬಣ ಬಡಿದಾಟ ಜೋರಾಗಿದೆ. ಆರೋಪ, ಪ್ರತ್ಯಾರೋಪ ಎರಡು ಕಡೆಯಿಂದ ನಡೆಯುತ್ತಿದೆ. ಇದೀಗ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ನೇತೃತ್ವದಲ್ಲಿ ಬೆಂಗಳೂರಲ್ಲಿ ಮತ್ತೆ ಸಭೆ ಸೇರಿದ್ದು,‌ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಹಾಗೂ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್‌. ರಾಜಶೇಖರ್‌ ಬದಲಾವಣೆ ಮಾಡುವಂತೆ ವರಿಷ್ಠರ ಮೇಲೆ ಒತ್ತಡ ಹಾಕಲು ನಿರ್ಧಾರ ಕೈಗೊಳ್ಳಲಾಯಿತು.

ದಾವಣಗೆರೆ: ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನ

ಮಾಜಿ ಸಚಿವ ಕುಮಾರ ಬಂಗಾರಪ್ಪ ಬೆಂಗಳೂರಿನ ನಿವಾಸದಲ್ಲಿ ನಿನ್ನೆ (ನ.30) ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಾಜಿ ಸಚಿವ ರಮೇಶ ಜಾರಕಿಹೊಳಿ, ಶಾಸಕ ಬಿ.ಪಿ.ಹರೀಶ್ ಸೇರಿದಂತೆ ಜಿಲ್ಲೆಯ 20ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಭಾಗಿಯಾಗಿದ್ದರು.

ಹೊಂದಾಣಿಕೆ ಇಲ್ಲ

ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವವರೆಗೂ ಹೊಂದಾಣಿಕೆ ಅಸಾಧ್ಯ. ಕೋರ್‌ ಕಮಿಟಿ ಜಿಲ್ಲೆಗೆ ಆಗಮಿಸಿದ್ದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಭೇಟಿಯಾಗಿ ಚರ್ಚಿಸಿದ್ದರು. ನನ್ನ ನಿಲುವನ್ನು ಅವರಿಗೆ ಸ್ಪಷ್ಟಪಡಿಸಿದ್ದೇನೆ. ಅದರಾಚೆಗೆ ಯಾವುದೇ ಮಾತುಕತೆ, ಹೊಂದಾಣಿಕೆ ನಡೆದಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಸಭೆಯಲ್ಲಿ ಸ್ಪಷ್ಟಪಡಿಸಿದರು ಎಂಬುದು ಮೂಲಗಳು ತಿಳಿಸಿವೆ.

ದಾವಣಗೆರೆ: ಆಸ್ತಿ, ನೀರಿನ ತೆರಿಗೆ ಬಾಕಿ ಪಾವತಿ ಮಾಡದಿದ್ರೆ ನಿಮ್ಮ ಆಸ್ತಿ ಮಹಾನಗರಪಾಲಿಕೆಗೆ ಲಿಂಕ್..!; ಆಸ್ತಿ ಮಾರಾಟ, ವರ್ಗಾವಣೆ ಕಷ್ಟ

ಬದಲಾವಣೆಗೆ ಪಟ್ಟು

ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಎಂ.ಪಿ. ರೇಣುಕಾಚಾರ್ಯ ಹಾಗೂ ಇತರರು ಪಕ್ಷ ವಿರೋಧಿ ಚಟುವಟಿಕೆ ಕಾರಣ. ಇದಕ್ಕೆ ಸಂಬಂಧಿಸಿದ ಸಾಕ್ಷ್ಯಗಳಿವೆ. ಪಕ್ಷದ ಕೇಂದ್ರ ಶಿಸ್ತು ಸಮಿತಿ ಷೋಕಾಸ್‌ ನೋಟಿಸ್‌ ನೀಡಿದರೂ ಕ್ರಮ ಕೈಗೊಂಡಿಲ್ಲ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್‌. ರಾಜಶೇಖರ್‌ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ.

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಬಣದ ಜೊತೆಗೆ ಗುರುತಿಸಿಕೊಂಡಿದ್ದಾರೆ. ಪಕ್ಷದ ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆಯುವಲ್ಲಿ ವಿಫಲರಾಗಿದ್ದಾರೆ. ಅವರನ್ನು ಬದಲಾವಣೆ ಮಾಡುವಂತೆ ಪಟ್ಟು ಸಡಿಲಿಸದಿರಲು ನಿರ್ಧರಿಸಿದ್ದಾರೆ.

ಹರಿಹರದ ಶಾಸಕ ಬಿ.ಪಿ. ಹರೀಶ್‌, ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಯಶವಂತರಾವ್‌ ಜಾಧವ್‌, ವೀರೇಶ್‌ ಹನಗವಾಡಿ, ಮುಖಂಡರಾದ ಬಿ.ಎಸ್‌. ಜಗದೀಶ್‌, ಎ.ಬಿ. ಹನುಮಂತಪ್ಪ, ಶಾಂತರಾಜ ಪಾಟೀಲ, ಲಿಂಗರಾಜ್‌ ಸೇರಿ ಅನೇಕರು ಸಭೆಯಲ್ಲಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *