ದಾವಣಗೆರೆ: ಒಂದು ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಜೆಪಿಗೆ ಬಂದು ಮುಖ್ಯಮಂತ್ರಿಯಾದರೆ ವಿಜಯೇಂದ್ರ ಉಪಮುಖ್ಯಮಂತ್ರಿ ಆಗುತ್ತಾರೆ ಎನ್ನಲಾಗುತ್ತಿದೆ. ಇದು ನಿಜವಾದ್ರೆ ಕರ್ನಾಟಕದ ನೈಸರ್ಗಿಕ ಸಂಪತ್ತು ಉಳಿಯುವುದಿಲ್ಲ. ಉಸಿರಾಡುವ ಗಾಳಿಗೂ ತೆರಿಗೆ ಕಟ್ಟಬೇಕಾದ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವ್ಯಂಗ್ಯವಾಡಿದರು.
ವಿಜಯೇಂದ್ರ ಬದಲಾವಣೆ ಮಾಡದಿದ್ರೆ ಹೊಸ ಪಕ್ಷ ಕಟ್ಟುತ್ತೇವೆ
ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಅವರನ್ನು ಬದಲಾವಣೆ ಮಾಡದೇ ಇದ್ದರೆ ಹೊಸ ಪಕ್ಷ ಕಟ್ಟುತ್ತೇವೆ. ಬಿಜೆಪಿಯ ನಿಷ್ಠಾವಂತರು ಹೊಸ ಪಕ್ಷಕ್ಕೆ ಬರುತ್ತಾರೆ. ವಿಜಯೇಂದ್ರ ಬಿಜೆಪಿ ಚುಕ್ಕಾಣಿ ಹಿಡಿದ ಬಳಿಕ ಪಕ್ಷ ದುರ್ಬಲವಾಗಿದೆ ಎಂದರು.
ದಾವಣಗೆರೆ; ಅಡಿಕೆ ದರ ಸ್ಥಿರ; ನ.21ರ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
ಪಕ್ಷ ನಿಷ್ಠರಲ್ಲಿ ಬೇಸರ ಮೂಡಿಸಿದೆ
ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಕಂಡಿದೆ. ಹೀಗಾಗಿ ಪಕ್ಷದ ನಾಯಕರು ವಿಜಯೇಂದ್ರ ಬದಲಾವಣೆಗೆ ನಾಯಕರು ಪಟ್ಟು ಹಿಡಿದ್ದಾರೆ. ಜಯೇಂದ್ರ ನಾಲ್ಕಾರು ಬೆಂಬಲಿಗರನ್ನು ಜೊತೆಯಲ್ಲಿಟ್ಟುಕೊಂಡು ರಾಜ್ಯ ಸುತ್ತುತ್ತಿದ್ದಾರೆ. ಹಿಂಬಾಲಕರನ್ನು ಮಾತ್ರ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಇಂತಹ ಕಾರ್ಯಗಳು ಪಕ್ಷನಿಷ್ಠರಲ್ಲಿ ಬೇಸರ ಮೂಡಿಸಿದೆ ಎಂದರು.
ಸಂಚಾರಿ ಇ-ಚಲನ್ | ಬಾಕಿ ದಂಡ ಪಾತಿಸಲು ಶೇ.50ರಷ್ಟು ರಿಯಾಯಿತಿ ಘೋಷಿಸಿದ ಸರ್ಕಾರ
ಕರ್ನಾಟಕದಲ್ಲಿ ಹಿಂದುತ್ವದ ಅಲೆ ಎದ್ದಿದೆ
ಕಾರಿನ ಡಿಕ್ಕಿಯಲ್ಲಿ ಶಾಲು, ಹಾರ ಇಟ್ಟುಕೊಂಡು ಸನ್ಮಾನ ಮಾಡಿಸಿಕೊಳ್ಳುತ್ತಾರೆ. ಬೆಂಬಲಿಗರನ್ನು ಮುಂದೆಬಿಟ್ಟು ಜೈಕಾರ ಹಾಕಿಸಿಕೊಳ್ಳುತ್ತಾರೆ. ಕರ್ನಾಟಕದಲ್ಲಿ ಹಿಂದುತ್ವದ ಅಲೆ ಎದ್ದಿದೆ. ಬಿಜೆಪಿಗೆ ಪರ್ಯಾಯವಾಗಿ ಹೊಸ ಪಕ್ಷ ಕಟ್ಟಿದರೆ ನಿರೀಕ್ಷೆಗಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ನಿಶ್ಚಿತ. ಬಿಜೆಪಿಯ ಭಿನ್ನಮತಕ್ಕೆ ನಾನು ಸೂತ್ರದಾರನಲ್ಲ. ರಮೇಶ್ ಜಾರಕಿಹೊಳಿ ಅವರಿಗೆ ವಿಜಯೇಂದ್ರ ಮೋಸ ಮಾಡಿದ್ದಾರೆ. ಪಕ್ಷದ ನಿಷ್ಠಾವಂತ ನಾಯಕರು ಒಂದೆಡೆ ಸೇರಿ ಚರ್ಚಿಸಿದ್ದಾರೆ ಅಷ್ಟೇ ಎಂದರು.



