ದಾವಣಗೆರೆ: ಜೆಡಿಎಸ್ ಮುಖಂಡ ಟಿ.ಅಸ್ಕರ್ ಕೊಲೆಯತ್ನ ಪ್ರಕರಣದ ಹಿನ್ನೆಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ ಅವರನ್ನು ಅಜಾದ್ ನಗರ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ: ಜಗಳವಾಡುತ್ತ ಬೈಕ್ ಚಾಲನೆ |ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ; ಯುವತಿ ಸಾವು
ನ್ಯಾಯಾಂಗ ಬಂಧನ
ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ ಖಚಿತವಾದ ಹಿನ್ನೆಲೆಯಲ್ಲಿ ನ.21ರಂದು ಬಂಧನ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಂಚಾರಿ ಇ-ಚಲನ್ | ಬಾಕಿ ದಂಡ ಪಾತಿಸಲು ಶೇ.50ರಷ್ಟು ರಿಯಾಯಿತಿ ಘೋಷಿಸಿದ ಸರ್ಕಾರ
ಚಾಕುವಿನಿಂದ ಇರಿದು ಹಲ್ಲೆ
ನ.10ರಂದು ಬಾಷಾ ನಗರದಲ್ಲಿ ಆಯೋಜಿಸಿ ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿದ್ದ ಅಸ್ಕರ್ ಮೇಲೆ ಕಾಂಗ್ರೆಸ್ ಮುಖಂಡ ಖಾಲೀದ್ ಪೈಲ್ವಾನ್ ದಾಳಿ ನಡೆಸಿ ಚಾಕುವಿನಿಂದ
ಇರಿದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅಸ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಾವಣಗೆರೆ; ಅಡಿಕೆ ದರ ಸ್ಥಿರ; ನ.21ರ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
ಆರೋಪಿಗೆ ಆಶ್ರಯ, ಹಣಕಾಸಿನ ನೆರವು
ತಲೆಮರೆ ಸಿಕೊಂಡಿರುವ ಆರೋಪಿ ಬಂಧನಕ್ಕೆ
ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಅಸ್ಕರ್ ಕೊಲೆಗೆ ಯತ್ನಿಸಿದ ಆರೋಪಿ ಖಾಲೀದ್ ಪೈಲ್ವಾನ್ಗೆ ಸವಿತಾ ಸಹಾಯ ಮಾಡಿದ್ದು, ತನಿಖೆಯಿಂದ ಗೊತ್ತಾಗಿದೆ. ಆರೋಪಿಗೆ
ಆಶ್ರಯ ಕಲ್ಪಿಸಿ, ಹಣಕಾಸಿನ ನೆರವು ನೀಡಿ ತಪ್ಪಿಸಿಕೊಳ್ಳಲು ಸಹಕರಿಸಿದ್ದಾರೆ ಆರೋಪ ಸವಿತಾ ಮೇಲಿದೆ.
ಮಾಯಕೊಂಡ ಟಿಕೆಟ್ ಆಕಾಂಕ್ಷಿ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸವಿತಾ ಮಲ್ಲೇಶ್ ನಾಯ್ಕ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಕೈತಪ್ಪಿದ್ದರಿಂದ
ಅಸಮಾಧಾನಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದರು.



