ದಾವಣಗೆರೆ; ಅಡಿಕೆ ದರ ದಿಢೀರ್ ಕುಸಿತ; ನ.24ರ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರ (arecanut rate) ದಿಢೀರ್ ಕುಸಿತ ಕಂಡಿದೆ‌. ನವೆಂಬರ್ ಆರಂಭದಲ್ಲಿ ಚೇತರಿಕೆ ಕಂಡು ಸ್ಥಿರವಾಗಿದ್ದ ದರ, ಇದೀಗ ಒಮ್ಮೆಲೇ 1,200 ರೂ. ಕುಸಿದಿದೆ. ಈ ಮೂಲಕ 15 ದಿನ ಬಳಿಕ ಮೊದಲ ಸಲ ಕ್ಚಿಂಟಲ್ ಗೆ 60 ಸಾವಿರ ಒಳಗೆ ಬಂದಿದೆ.

ಈ ವರ್ಷ ಕೊಯ್ಲು ಬಂದಾಗಿನಿಂದಲೂ ಭಾರಿ ವೇಗದಲ್ಲಿ ದರ ಏರಿಕೆ ಕಂಡಿತ್ತು. ಎರಡು ವಾರದ ನಂತರ ಮೊದಲ ಬಾರಿಗೆ ದರ ಇಳಿಕೆ ಕಂಡಿದೆ. ಪ್ರಸ್ತುತ ಹಸಿ ಅಡಿಕೆ ದರ ಕ್ವಿಂಟಲ್ ಗೆ 7,500 ರೂ.ಗೆ ಮಾರಾಟವಾಗಿದೆ.

ದಾವಣಗೆರೆ: ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಸ್ಥಾಪನೆಗೆ ವಡ್ಡಿನಹಳ್ಳಿ ಬಳಿ ಭೂ ಮಂಜೂರಾತಿ

ನ.24ರ ಚನ್ನಗಿರಿ ಅಡಿಕೆ ಧಾರಣೆ (ಪ್ರತಿ ಕ್ವಿಂಟಲ್ ದರ)

  • ಗರಿಷ್ಠ ಬೆಲೆ 59,299
  • ಕನಿಷ್ಠ ಬೆಲೆ 54,199
  • ಸರಾಸರಿ ಬೆಲೆ 58,692

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ (Channagiri) ವಹಿವಾಟಿನಲ್ಲಿ‌ ನ.24ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 59,299 ರೂ. ಇದ್ದು, ಕನಿಷ್ಠ ಬೆಲೆ 54,199 ರೂ., ಸರಾಸರಿ ಬೆಲೆ 58,692 ರೂ.‌ಇದೆ. ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಅತೀ ಹೆಚ್ಚು ಮಳೆಯಾಗಿದ್ದರಿಂದ ಅಡಿಕೆ ಇಳುವರಿ ಸಹ ಹೆಚ್ವಿದೆ. ಕೊಯ್ಲು ಬರದಿಂದ ಸಾಗಿದೆ.

ಕಳೆದ ಮೂರು ವರ್ಷದ ಗರಿಷ್ಠ ದರ ವಿವರ

  • 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ
  • 2024 ಮೇ ತಿಂಗಳಲ್ಲಿ ಗರಿಷ್ಠ ದರ 55 ಸಾವಿರ
  • 2025 ಅಕ್ಟೋಬರ್ ‌ನಲ್ಲಿ ಗರಿಷ್ಠ ದರ 68,349 ರೂ.

ಸಂಚಾರಿ ಇ-ಚಲನ್ | ಬಾಕಿ ದಂಡ ಪಾತಿಸಲು ಶೇ.50ರಷ್ಟು ರಿಯಾಯಿತಿ ಘೋಷಿಸಿದ ಸರ್ಕಾರ

2025ರ ಜನವರಿ ಕೊನೆಯಲ್ಲಿ 52 ಸಾವಿರ ಒಳಗೆ ಇದ್ದ ದರ, ಫೆಬ್ರವರಿಯಲ್ಲಿ ಮತ್ತೆ 53 ಸಾವಿರ ಗಡಿದಾಟಿತ್ತು. ಮಾರ್ಚ್ ಮೊದಲ ವಾರದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ತಿಂಗಳ ಕೊನೆಯಲ್ಲಿ ಮತ್ತೆ 53 ಸಾವಿರ ಗಡಿ ಮುಟ್ಟಿತ್ತು. ಮೇ ತಿಂಗಳಲ್ಲಿ 59,512 ರೂ.ಗೆ ಇಳಿದಿದ್ದು, ಜೂನ್ ಆರಂಭದಲ್ಲಿ 59,000 ರೂ. ಇದ್ದು ಕೊನೆಯಲ್ಲಿ 56,599 ರೂ. ಗೆ ಇಳಿಕೆಯಾಗಿತ್ತು. ಜುಲೈ ಮೊದಲ ವಾರ ಚೇತರಿಕೆ ಕಂಡು ಈಗ 58,099 ರೂ. ಆಗಿತ್ತು. ಆಗಸ್ಟ್ ಆರಂಭದಲ್ಲಿ ಸತತ ಏರಿಕೆ ಕಂಡು ಕ್ವಿಂಟಲ್ ಗೆ 60,500ರೂ. ತಲುಪಿತ್ತು. ಈಗ ಸೆಪ್ಟೆಂಬರ್ ನಲ್ಲಿ 62,889 ರೂ. ಇತ್ತು. ಅಕ್ಟೋಬರ್ ತಿಂಗಳಲ್ಲಿ ಈ ವರ್ಷದಲ್ಲಿಯೇ ಗರಿಷ್ಠ ಬೆಲೆ 68, 349 ರೂ. ಇತ್ತು. ನವೆಂಬರ್ ನಲ್ಲಿ 59,299 ರೂ.ಗೆ ಇದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *