ದಾವಣಗೆರೆ: ಅಕ್ರಮ ಆಸ್ತಿ ಸಂಪಾದನೆಯ ಆರೋಪ ಹಿನ್ನೆಲೆ ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಮಾರಾಟ ವಿಭಾಗದ ಸಹಾಯಕ ನಿರ್ದೇಶಕ ಜೆ. ಪ್ರಭು ಮನೆ, ಕಚೇರಿ ಸೇರಿ ಮೂರು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಇಂದು(ನ.25) ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ದಾವಣಗೆರೆ: ಪೊಲೀಸರೇ ಚಿನ್ನದ ದರೋಡೆಗೆ ಸಾಥ್; ಇಬ್ಬರು ಪಿಎಸ್ಐ ಸೇರಿದಂತೆ 7 ಆರೋಪಿಗಳ ಬಂಧನ 8 ಲಕ್ಷ ಮೌಲ್ಯದ ಚಿನ್ನ ವಶ
ಆಂಜನೇಯ ಬಡಾವಣೆಯ ಮನೆ, ದೊಡ್ಡಘಟ್ಟ ಗ್ರಾಮದ ತೋಟದ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪೊರೆ ನೇತೃತ್ವದಲ್ಲಿ ದಾಳಿ ನಡೆದಿದೆ. ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಮೇರೆಗೆ ಈ ದಾಳಿ ನಡೆದಿದೆ. ದಾಳಿ ವೇಳೆ ದಾಖಲೆ ಪರಿಶೀಲಿಸಲಾಗಿದೆ ಡಿವೈಎಸ್ಪಿ ಕಲಾವತಿ, ಇನ್ಸ್ಪೆಕ್ಟರ್ ಗುರುಬಸವರಾಜ್ ತಂಡ ದಾಳಿಯಲ್ಲಿ ಭಾಗಿಯಾಗಿದ್ದರು.
ಇನ್ಮುಂದೆ ದಾವಣಗೆರೆಯಿಂದ ಮಂತ್ರಾಲಯಕ್ಕೆ ಪ್ರತಿನಿತ್ಯ ಎಸಿ ವೋಲ್ವೊ ಬಸ್ ಸೌಲಭ್ಯ; ಸಮಯ, ಮಾರ್ಗ ವಿವರ ಇಲ್ಲಿದೆ..



