ದಾವಣಗೆರೆ: ಲೋಕಾಯುಕ್ತ ಭರ್ಜರಿ ಬೇಟೆ; APMC ಸಹಾಯಕ‌ ನಿರ್ದೇಶಕ ಮನೆಯಲ್ಲಿ ಸಿಕ್ತು ಬರೋಬ್ಬರಿ 1 ಕೆಜಿ ಚಿನ್ನ, 10 ಕೆಜಿ ಬೆಳ್ಳಿ, 7.5 ಲಕ್ಷ ನಗದು, 6 ನಿವೇಶ ಪತ್ರ ಪತ್ತೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಅಕ್ರಮ ಆಸ್ತಿ ಸಂಪಾದನೆ  ಹಿನ್ನೆಲೆ ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (APMC) ಮಾರಾಟ ವಿಭಾಗದ ಸಹಾಯಕ‌ ನಿರ್ದೇಶಕ ಜೆ. ಪ್ರಭು ಮನೆ, ಕಚೇರಿ ಮೇಲೆ‌ ಇಂದು (ನ.25) ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಲೋಕಾಯುಕ್ತರು ಪೊಲೀಸರು ಬರೋಬ್ಬರಿ 1 ಕೆ.ಜಿ. 700 ಗ್ರಾಂ ಚಿನ್ನಾಭರಣ ಹಾಗೂ 10 ಕೆ.ಜಿ ಬೆಳ್ಳಿ ಸಾಮಗ್ರಿ, 7.5 ಲಕ್ಷ ನಗದು ಹಾಗೂ 6 ನಿವೇಶ ಪತ್ರಗಳು ಪತ್ತೆಯಾಗಿದ್ದು, ಎಲ್ಲ ಅಕ್ರಮ ಸಂಪತ್ತು ವಶಕ್ಕೆ ಪಡೆದಿದ್ದಾರೆ.

ಭೀಕರ ಅಪಘಾತ | ಬೆಸ್ಕಾಂ ಎಂಡಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾ*ವು

ದಾವಣಗೆರೆ ನಗರದ ಆಂಜನೇಯ ಬಡಾವಣೆಯ ಮನೆ‌, ಚನ್ನಗಿರಿ ತಾಲ್ಲೂಕಿನ ದೊಡ್ಡಘಟ್ಟ ಗ್ರಾಮದ ತೋಟದ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪೊರೆ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು.

ಏನೆಲ್ಲಾ ವಶಕ್ಕೆ ಪಡೆಯಲಾಯಿತು..?

  • 1 ಕೆ.ಜಿ. 700 ಗ್ರಾಂ ಚಿನ್ನಾಭರಣ
  • 10 ಕೆ.ಜಿ ಬೆಳ್ಳಿ ಸಾಮಗ್ರಿ
  • 7.5 ಲಕ್ಷ ನಗದು
  • 6 ನಿವೇಶ ಪತ್ರಗಳು

ದಾವಣಗೆರೆ: ಪೊಲೀಸರೇ ಚಿನ್ನದ ದರೋಡೆಗೆ ಸಾಥ್; ಇಬ್ಬರು ಪಿಎಸ್‌ಐ ಸೇರಿದಂತೆ 7 ಆರೋಪಿಗಳ ಬಂಧನ 8 ಲಕ್ಷ ಮೌಲ್ಯದ ಚಿನ್ನ ವಶ

 

ಮನೆಯಲ್ಲಿ 7.5 ಲಕ್ಷ ನಗದು ಪತ್ತೆಯಾಗಿದೆ. ಎರಡು ಮನೆ, 6 ನಿವೇಶನಗಳ ದಾಖಲೆಗಳು ಪತ್ತೆಯಾಗಿವೆ. ಡಿವೈಎಸ್‌ಪಿ ಕಲಾವತಿ, ಇನ್‌ಸ್ಪೆಕ್ಟರ್‌ ಗುರುಬಸವರಾಜ್ ತಂಡ ದಾಳಿಯಲ್ಲಿ ಭಾಗಿಯಾಗಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *