ದಾವಣಗೆರೆ | ಕುಸಿತ ಹಾದಿ‌ ಹಿಡಿದ ಅಡಿಕೆ ದರ- ಡಿ.3ರ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರ (arecanut rate) ಕಳೆದ ಎರಡ್ಮೂರು ದಿನದಿಂದ ಕುಸಿತದ ಹಾದಿ ಹಿಡಿದಿದೆ. ಕಳೆದ ತಿಂಗಳು ಪ್ರತಿ ಕ್ವಿಂಟಲ್ ಅಡಿಕೆ ದರ 60 ಸಾವಿರ ಇತ್ತು. ಈಗ 58 ಸಾವಿರಕ್ಕೆ ಇಳಿಕೆ ಕಂಡಿದೆ.

ಕಂದಾಯ ಇಲಾಖೆ ಮಹತ್ವ‌‌ ನಿರ್ಧಾರ; ಇನ್ಮುಂದೆ ಒಂದೇ ಹಾಳೆಯಲ್ಲಿ ಪಹಣಿ, ಆಕಾರ ಬಂದ್‌, ಪೋಡಿ ನಕ್ಷೆ, ಮ್ಯುಟೇಶನ್‌ ಲಭ್ಯ

ಈ ವರ್ಷ ಕೊಯ್ಲು ಬಂದಾಗಿನಿಂದಲೂ ಭಾರಿ ವೇಗದಲ್ಲಿ ದರ ಏರಿಕೆ ಕಂಡಿತ್ತು. ಆದರೆ,‌ ವರ್ಷದ ಕೊನೆ ತಿಂಗಳಲ್ಲಿ ಇಳಿಕೆ ಕಂಡಿದೆ.

ಡಿ‌.3ರ ಚನ್ನಗಿರಿ ಅಡಿಕೆ ಧಾರಣೆ (ಪ್ರತಿ ಕ್ವಿಂಟಲ್ ದರ)

  • ಗರಿಷ್ಠ ಬೆಲೆ 58,200
  • ಕನಿಷ್ಠ ಬೆಲೆ 53,099
  • ಸರಾಸರಿ ಬೆಲೆ 57,212

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ (Channagiri) ವಹಿವಾಟಿನಲ್ಲಿ‌ ಡಿ.3ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 58,200 ರೂ. ಇದ್ದು, ಕನಿಷ್ಠ ಬೆಲೆ 53,099 ರೂ., ಸರಾಸರಿ ಬೆಲೆ 57,212 ರೂ.‌ಇದೆ. ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಅತೀ ಹೆಚ್ಚು ಮಳೆಯಾಗಿದ್ದರಿಂದ ಅಡಿಕೆ ಇಳುವರಿ ಸಹ ಹೆಚ್ವಿದೆ. ಕೊಯ್ಲು ಬರದಿಂದ ಸಾಗಿದೆ.

ದಾವಣಗೆರೆ: ಹಿಂಗಾರು ಹಂಗಾಮಿನ ಬೆಳೆಗಳಿಗೆ ಫಸಲ್ ಬಿಮಾ ಯೋಜನೆ ಜಾರಿ; ಯಾವ ಬೆಳೆಗೆ ವಿಮೆ ಸೌಲಭ್ಯ..?

ಕಳೆದ ಮೂರು ವರ್ಷದ ಗರಿಷ್ಠ ದರ ವಿವರ

  • 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ
  • 2024 ಮೇ ತಿಂಗಳಲ್ಲಿ ಗರಿಷ್ಠ ದರ 55 ಸಾವಿರ
  • 2025 ಅಕ್ಟೋಬರ್ ‌ನಲ್ಲಿ ಗರಿಷ್ಠ ದರ 68,349 ರೂ.

2025ರ ಜನವರಿ ಕೊನೆಯಲ್ಲಿ 52 ಸಾವಿರ ಒಳಗೆ ಇದ್ದ ದರ, ಫೆಬ್ರವರಿಯಲ್ಲಿ ಮತ್ತೆ 53 ಸಾವಿರ ಗಡಿದಾಟಿತ್ತು. ಮಾರ್ಚ್ ಮೊದಲ ವಾರದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ತಿಂಗಳ ಕೊನೆಯಲ್ಲಿ ಮತ್ತೆ 53 ಸಾವಿರ ಗಡಿ ಮುಟ್ಟಿತ್ತು. ಮೇ ತಿಂಗಳಲ್ಲಿ 59,512 ರೂ.ಗೆ ಇಳಿದಿದ್ದು, ಜೂನ್ ಆರಂಭದಲ್ಲಿ 59,000 ರೂ. ಇದ್ದು ಕೊನೆಯಲ್ಲಿ 56,599 ರೂ. ಗೆ ಇಳಿಕೆಯಾಗಿತ್ತು. ಜುಲೈ ಮೊದಲ ವಾರ ಚೇತರಿಕೆ ಕಂಡು ಈಗ 58,099 ರೂ. ಆಗಿತ್ತು. ಆಗಸ್ಟ್ ಆರಂಭದಲ್ಲಿ ಸತತ ಏರಿಕೆ ಕಂಡು ಕ್ವಿಂಟಲ್ ಗೆ 60,500ರೂ. ತಲುಪಿತ್ತು. ಈಗ ಸೆಪ್ಟೆಂಬರ್ ನಲ್ಲಿ 62,889 ರೂ. ಇತ್ತು. ಅಕ್ಟೋಬರ್ ತಿಂಗಳಲ್ಲಿ ಈ ವರ್ಷದಲ್ಲಿಯೇ ಗರಿಷ್ಠ ಬೆಲೆ 68, 349 ರೂ. ಇತ್ತು. ನವೆಂಬರ್ ನಲ್ಲಿ 58,200 ರೂ.ಗೆ ಇದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *