ಬೆಳಗಾವಿ: ರಾಜ್ಯದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಸರ್ಕಾರ ಸಿದ್ಧತೆ ನಡೆಸಿದೆ. ಹೊಸ ಮೀಸಲಾತಿ ಅನುಸಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿಗಾಗಿ 3,200 ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ದಾವಣಗೆರೆ: ನಕಲಿ ಬಂಗಾರ ನೀಡಿ ವಂಚಿಸುತ್ತಿದ್ದ ಆರೋಪಿಗಳ ಬಂಧನ; 5.90 ಲಕ್ಷ ನಗದು ಸಹಿತ ಸ್ವತ್ತು ವಶ
3 ಕಿ.ಮೀ.ಗೊಂದು ನ್ಯಾಯಬೆಲೆ ಅಂಗಡಿ
ರಾಜ್ಯದ ಗ್ರಾಮೀಣ ಭಾಗದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ಆರಂಭಿಸುವ ಕುರಿತಂತೆ ಕಾಂಗ್ರೆಸ್ನ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು ಸರ್ಕಾರದ ಗಮನ ಸೆಳೆದರು. ಅದಕ್ಕೆ ಉತ್ತರಿಸಿದ ಮುನಿಯಪ್ಪ, ನಿಯಮದಂತೆ 3 ಕಿ.ಮೀ.ಗೊಂದು ನ್ಯಾಯಬೆಲೆ ಅಂಗಡಿ ತೆರೆಯಲಾಗುವುದು. ಒಂದು ವೇಳೆ ನ್ಯಾಯಬೆಲೆ ಅಂಗಡಿಗಳಿಲ್ಲದ ಕಡೆಗಳಲ್ಲಿ ಸಂಚಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಿಸಲಾಗುವುದು ಎಂದರು.
ಸಂಚಾರಿ ನ್ಯಾಯಬೆಲೆ ಅಂಗಡಿ
ಗುಡ್ಡಗಾಡು ಪ್ರದೇಶದಲ್ಲಿ ಕಡಿಮೆ ಪಡಿತರ ಚೀಟಿದಾರರಿದ್ದರೂ ಸಂಚಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಿಸುತ್ತೇವೆ. ಗ್ರಾಮಾಂತರ ಭಾಗದಲ್ಲಿ 500 ಮತ್ತು ನಗರ ಪ್ರದೇಶದಲ್ಲಿ 800 ಪಡಿತರ ಚೀಟಿಗೊಂದು ನ್ಯಾಯಬೆಲೆ ಅಂಗಡಿ ತೆರೆಯಲಾಗಿದೆ. ಇದೀಗ ಎಸ್ಸಿ, ಎಸ್ಟಿ ಸಮುದಾಯದವರಿಗಾಗಿ ಹೊಸದಾಗಿ 3,200 ನ್ಯಾಯಬೆಲೆ ಅಂಗಡಿ ತೆರೆಯಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.



