ನಮ್ಮ ತತ್ವ ಸಿದ್ದಾಂತಕ್ಕೆ ವಿರುದ್ಧವಾಗಿರುವ ಬಿಜೆಪಿ ಸೇರಲು ಸಾಧ್ಯವೇ..?, ಇದೊಂದು ಮೂರ್ಖತನದ ಪ್ರಚಾರ: ಸಿದ್ದರಾಮಯ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸೇರುತ್ತಾರೆ ಅನ್ನೋ ಸುದ್ದಿಗೆ ಕೆಂಡಕಾರಿದ ಸಿದ್ದರಾಮಯ್ಯ ಅವರು, ಸುಳ್ಳು ಪ್ರಚಾರ ಮಾಡುವವರು ಮೂರ್ಖರು. ನಮ್ಮ ಎಲ್ಲಾ ತತ್ವ ಸಿದ್ಧಾಂತಕ್ಕೆ ವಿರುದ್ಧವಾಗಿರುವ ಬಿಜೆಪಿ ಸೇರಲು ಸಾಧ್ಯವೇ..? ಇದೊಂದು ಮೂರ್ಖತನದ ಪ್ರಚಾರ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿ ಹುಟ್ಟು ಹಬ್ಬದ ದಿನದ ಮುಖ್ಯಮಂತ್ರಿ ಬಿ.ಎಸ್.  ಯಡಿಯೂರಪ್ಪ ಭೇಟಿ ಮಾಡಿ ಶುಭಾಶಯ ಕೋರಿದ್ದರು. ಈ ಭೇಟಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ಉಂಟು ಮಾಡಿತ್ತು. ಸಿದ್ದರಾಮಯ್ಯ ಬಿಜೆಪಿ ಸೇರಲಿದ್ದಾರೆ ಅನ್ನೋ ಸುದ್ದಿ ರಾಜಕೀಯ  ಪಡಸಾಲೆಯಲ್ಲಿ ಹರಡಿದ್ದವು. ಕೆಲವು  ಸಚಿವರು ಸಿದ್ಧರಾಮಯ್ಯ ಬಿಜೆಪಿ ಸೇರಿದರೂ ಸೇರಬಹದು ಎಂದಿದ್ದರು.

ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ ಎಂದಿದ್ದಾರೆ.ಕಾನೂನು ವಿದ್ಯಾರ್ಥಿಯಾಗಿ 1972ರಲ್ಲಿ ರಾಜಕೀಯ ಪ್ರವೇಶ ಮಾಡಿದಾಗಿಂದ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ ವ್ಯವಸ್ಥೆ ಪರ ಹೋರಾಡುತ್ತಾ ಬಂದಿದ್ದೇನೆ, ಬಿಜೆಪಿ ಈ ಎಲ್ಲಾ ತತ್ವಗಳಿಗೂ ವಿರುದ್ಧವಾಗಿದೆ. ಹೀಗಿರುವಾಗ ಬಿಜೆಪಿ ಸೇರಲು ಸಾಧ್ಯವೇ? ಇದೊಂದು ಮೂರ್ಖತನದ ಪ್ರಚಾರ ಎಂದಿದ್ದಾರೆ.

 

ಇನ್ನು ಪಕ್ಷಾಂತರದ ವಿರುದ್ಧ ಗುಡುಗಿದ ಸಿದ್ದರಾಮಯ್ಯ,ಯಾರೇ ಆಗಲಿ ಒಂದು ಸಿದ್ಧಾಂತಕ್ಕೆ ಬದ್ಧವಾಗಿದ್ದಾಗ ಪದೇ ಪದೇ ಪಕ್ಷ ಬದಲಿಸುವಂತಹ ಸನ್ನಿವೇಶವೇ ಉದ್ಭವಿಸುವುದಿಲ್ಲ. ಅವಕಾಶವಾದಿ ರಾಜಕಾರಣಿಗಳು ಮಾತ್ರ ಅಧಿಕಾರ ಹುಡುಕಿಕೊಂಡು ಹೋಗುತ್ತಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಜನರಿಂದ ನೇರವಾಗಿ ಸಿಗಬೇಕೇ ಹೊರತು ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಹಪಹಪಿಸಬಾರದು ಪಕ್ಷ ಬಿಟ್ಟವರಿಗೆ ಟಾಂಗ್‌ ಕೊಟ್ಟಿದ್ದಾರೆ.

 

ಇನ್ನು ತಮ್ಮ ಕ್ಷೇತ್ರಕ್ಕೆ ಹಂಚಿಕೆಯಾದ ಅನುದಾನ ಬಗ್ಗೆ ಅಪಪ್ರಚಾರ ನಡೆಯುತ್ತಿದೆ.  ಬಾದಾಮಿ ಕ್ಷೇತ್ರದಲ್ಲಿ ರೂ.500 ಕೋಟಿ ವೆಚ್ಚದ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಬೇಡಿಕೆ ಇಟ್ಟಿದ್ದೀನಿ. ಯೋಜನೆ ಇನ್ನೂ ಅನುಮೋದನೆಗೊಂಡಿಲ್ಲ, ಆಗಲೇ ಬಿಜೆಪಿಯ ಕೆಲವು ನಾಯಕರು ಬಾದಾಮಿಗೆ ನಾವು ರೂ.650 ಕೋಟಿ ಕೊಟ್ಟಿದ್ದೀವಿ ಅಂತ ಪ್ರಚಾರ ಶುರು ಮಾಡಿಕೊಂಡಿದ್ದಾರೆ ಎಂದಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *