Connect with us

Dvgsuddi Kannada | online news portal | Kannada news online

ಮಾ.14 ರಂದು ತೂಲಹಳ್ಳಿಯ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ದೇವಸ್ಥಾನ ಕಳಸಾರೋಹಣ

ಪ್ರಮುಖ ಸುದ್ದಿ

ಮಾ.14 ರಂದು ತೂಲಹಳ್ಳಿಯ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ದೇವಸ್ಥಾನ ಕಳಸಾರೋಹಣ

ಡಿವಿಜಿ ಸುದ್ದಿ, ದಾವಣಗೆರೆ: ಮಾ.14 ರಂದು ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ತೂಲಹಳ್ಳಿ ಗ್ರಾಮದ ಶ್ರೀ ವಿಶ್ವಬಂಧು ಮರುಳ ಸಿದ್ದೇಶ್ವರ ದೇವಸ್ಥನದ ಕಳಸರೋಹಣ ಸಮಾರಂಭ, ಶ್ರೀ ಗುರು ಶಾಂತರಾಜದೇಶಿಕೇಂದ್ರ ಸ್ವಾಮೀಜಿ ಕಲ್ಯಾಣ ಮಂದಿರ ಹಾಗೂ ಕೆನರಾ ಬ್ಯಾಂಕ್ ಕಟ್ಟಡ ಉದ್ಘಾಟನೆ ತರಳಬಾಳು ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ನೆರವೇರಲಿದೆ.

ವಿಶೇಷ ಆಹ್ವಾನಿತರಾಗಿ ಶಾಸಕ ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಸಚಿವ ಆನಂದ್ ಸಿಂಗ್, ಬಳ್ಳಾರಿ ಸಂಸದ ವೈ. ದೇಏಂದ್ರಪ್ಪ, ಕೊಟ್ಟೂರು ತಾಲ್ಲೂಕು ಸಾದು ಲಿಂಗಾಯತ ಸಮಾಜದ ಅಧ್ಯಕ್ಷ ಡಾ. ಬಿ.ಸಿ. ಮೂಗಪ್ಪ, ಕೂಡ್ಲಿಗಿ ಶಾಸಕ ವೈ. ಗೋಪಾಲ ಕೃಷ್ಣ, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್, ಬಳ್ಳಾರಿ ಗ್ರಾಮಾಂತರ ಸಾಸಕ ಬಿ. ನಾಗೇಂದ್ರ, ಜಗಳೂರು ಶಾಸಕ ಎಸ್.ವಿ ರಾಮಚಂದ್ರ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

ತರಳಬಾಳು ಪರಂಪರೆಯ ವಿಷಯವಾಗಿ ಎಚ್. ಎಸ್. ರವಿ ಉಪನ್ಯಾಸ ನೀಡಲಿದ್ದಾರೆ. ಶ ಜಾಗತಿಕ ತಾಪಮಾನ ಏರಿಕೆ ಮತ್ತು ಪರಿಸರ ವಿಷಯ ಕುರಿತು ಜಿಲ್ಲಾ ಪರಿಸರ ಅಧಿಕಾರಿ ಡಾ. ಕೆ.ಬಿ. ಕೊಟ್ರೇಶ್ ಉಪನ್ಯಾಸ ನೀಡಲಿದ್ಧಾರೆ. ಮರಳಸಿದ್ದೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷರ ಯು. ಚನ್ನಬಸಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top