ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಸಾಲಬಾಳು ಗ್ರಾಮದ ಕಲ್ಲಗಿರಿ ರಂಗನಾಥ ಸ್ವಾಮಿ ಬೆಟ್ಟದಲ್ಲಿ ರಾಬರಿ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿಗಳಿಂದ 30 ಸಾವಿರ ನಗದ ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ಹಾಗೂ ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.
ದಾವಣಗೆರೆ ಉಪಚುನಾವಣೆ: ಕುಟುಂಬ ರಾಜಕಾರಣಕ್ಕೆ ಮಣಿ ಹಾಕಬೇಡಿ; ಅಹಿಂದ ವರ್ಗಕ್ಕೆ ಟಿಕೆಟ್ ನೀಡಿ
ಶಿವಮೊಗ್ಗದ ಜೀವನ್ ಎಂಬುವವರು ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲಬಾಳು ಗ್ರಾಮದ ಕಲ್ಬಗಿರಿ ರಂಗನಾಥ ಸ್ವಾಮಿ ಬೆಟ್ಟದ ವಿಂಡ್ ಫ್ಯಾನ್ ಬಳಿ ಇದ್ದಾಗ ಆ ಸ್ಥಳಕ್ಕೆ ಇಬ್ಬರು, ದೂರುದಾರನ್ನು ಹೆದರಿಸಿ ಬಲವಂತವಾಗಿ ಅವರಿಂದ ಹಣವನ್ನು ಕಿತ್ತುಕೊಂಡು ಪರಾಟರಿಯಾಗಿದ್ದರು. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ರಾಬರರಿ ಪ್ರಕರಣ ದಾಖಲಾಗಿತ್ತು.
ಎಳ್ಳು-ಬೆಲ್ಲ ಸವಿದು ಒಳ್ಳೆಯ ಮಾತನಾಡಿ: ತರಳಬಾಳು ಶ್ರೀ ಸಂಕ್ರಾಂತಿ ಶುಭ ಸಂದೇಶ
ಅಇ ಪ್ರಕರಣದ ಆರೋಪಿ ಪತ್ತೆಗಾಗಿ ಎಸ್ಪಿ ಉಮಾ ಪ್ರಶಾಂತ್ ಹಾಗೂ ಎಎಸ್ಪಿ ಪರಮೇಶ್ವರ ಹೆಗಡೆ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ರುದ್ರಪ್ಪ ಎಸ್ ಉಜ್ಜನಕೊಪ್ಪ, ಉಸ್ತುವಾರಿಯಲ್ಲಿ, ನ್ಯಾಮತಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರವಿ ಎನ್.ಎಸ್, ನ್ಯಾಮತಿ ಪೊಲೀಸ್ ಠಾಣೆ ಇವರ ನೇತೃತ್ವದಲ್ಲಿ ಅಧಿಕಾರಿ ಸಿಬ್ಬಂದಿಗಳನ್ನು ಒಳಗೊಂಡ ತಂಡವನ್ನು ರಚನೆ ಮಾಡಲಾಗಿತ್ತು.
ದಾವಣಗೆರೆ: ಬಿಜೆಪಿ ಮುಖಂಡ ಚಂದ್ರಶೇಖರ್ ಸಂಕೋಳ್ ಸಾವು; ಡಿಎನ್ಎ ಪರೀಕ್ಷೆ ಸಿದ್ಧತೆ
ಈ ತನಿಖೆ ಕೈಗೊಂಡು,ಪ್ರಕರಣಕ್ಕೆ ಸಂಬಂಧಿಸದಂತೆ ಇಬ್ಬರು ಆರೋಪಿಗಳಾದ ಎ1. ಅಣ್ಣಪ್ಪನಾಯ್ಕ, 27 ವರ್ಷ, ವಾಸ:- ಬಿಕೋನಹಳ್ಳಿ ಗ್ರಾಮ, ಶಿವಮೊಗ್ಗ ತಾಲ್ಲೂಕು. ಎ2. ಚೇತನ್, 26 ವರ್ಷ, ಕೂಲಿ ಕೆಲಸ, ವಾಸ:- ಬಿಕೋನಹಳ್ಳಿ ಗ್ರಾಮ, ಶಿವಮೊಗ್ಗ ತಾಲ್ಲೂಕು ಇವನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ ತಾವುಗಳು ಬಲವಂತವಾಗಿ ಹಣವನ್ನು ಕಿತ್ತುಕೊಂಡು ಹೋಗಿರುವುದಾಗಿ ಒಪ್ಪಿಕೊಂಡಿದ್ದಾರೆ.
ಆರೋಪಿಗಳಿಂದ 30,000/- ರೂ ಹಣ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸದರಿ ಪ್ರಕರಣದಲ್ಲಿ ಆರೋಪಿತರ ಪತ್ತೆಕಾರ್ಯದಲ್ಲಿ ಯಶಸ್ವಿಯಾದ ತಂಡಕ್ಕೆ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.



