ಯಾರು ಕೇಳದಿದ್ದರೂ ಪಂಚ ಗ್ಯಾರಂಟಿಗೆ 60 ಸಾವಿರ ಕೋಟಿ ಅನುದಾನ; ಕೆರೆಗಳಿಗೆ ನೀರು ಹರಿಸಲು ಅರ್ಜಿ ಹಾಕಿದ್ರೂ ನೀರಿಲ್ಲ; ಸರ್ಕಾರದ ನಿಲುವು ಟೀಕಿಸಿದ ತರಳಬಾಳು ಶ್ರೀ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಹರಿಹರ: ಸರ್ಕಾರಕ್ಕೆ ಯಾರು ಕೇಳದಿದ್ದರೂ ಪಂಚ ಗ್ಯಾರಂಟಿ ಯೋಜನೆ ಜಾರಿಗೆ ತಂದು ವರ್ಷಕ್ಕೆ 60,000 ಕೋಟಿ ಅನುದಾನ ನೀಡಲಾಗುತ್ತಿದೆ. ಆದರೆ, ರೈತರ ಬೆಳೆ ಇಲ್ಲದೆ ಒಣಗುತ್ತಿರುವ ಬೆಳೆಗೆ ಕೆರೆಗಳಿಗೆ ನೀರು ಹರಿಸಿರಿ ಎಂದು ಅರ್ಜಿ ಹಾಕಿದರು ನೀರಿಲ್ಲ ಎಂದು ನಿಲುವನ್ನು ಸಿರಿಗೆರೆ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಲಹೆ ಟೀಕಿಸಿದರು.

ದಾವಣಗೆರೆ: ಜಿಲ್ಲೆಯ ವಿವಿಧಡೆ ಕಳ್ಳತನ ಮಾಡುತ್ತಿದ್ದ ತಂದೆ, ಮಕ್ಕಳ ಬಂಧನ; ಬರೋಬ್ಬರಿ 10.90 ಲಕ್ಷ ಮೌಲ್ಯದ ಸ್ವತ್ತು ವಶ

ಕೆರೆಗಳಿಗೆ ನೀರು ಹರಿಸಿ

ಹರಿಹರದ ಹರಜಾತ್ರಾ ಮಹೋತ್ಸವದಲ್ಲಿ ಮಾತನಾಡಿ, ರಾಜ್ಯ ಸರ್ಕಾರವು ಪಂಚ ಗ್ಯಾರಂಟಿಗಳಿಗೆ ನೀಡುವಷ್ಟೇ ಆದ್ಯತೆಯನ್ನು ನೀರಾವರಿ ಸೌಲಭ್ಯಕ್ಕೂ ನೀಡಬೇಕು. ಚುನಾವಣೆಯಲ್ಲಿ ಯಾರು ಕೇಳದಿದ್ದರೂ ಪಂಚ ಗ್ಯಾರಂಟಿ ಘೋಷಣೆ ಮಾಡಲಾಯಿತು. ಇದಕ್ಕೆ ಸರ್ಕಾರ ₹60,000 ಕೋಟಿ ಅನುದಾನ ನೀಡಲಾಗುತ್ತಿದೆ. ಆದರೆ, ರೈತರ ಬದುಕಿಗೆ ಮೂಲ ಅವಶ್ಯಕತೆಯಾದ ಕೆರೆಗಳಿಗೆ ನೀರು ಹರಿಸಿ ಎಂದು ಅರ್ಜಿ ಹಾಕಿದರು ನೀರು ಸಿಗುತ್ತಿಲ್ಲ‌ ಎಂದು ಬೇಸರ‌ ವ್ಯಕ್ತಪಡಿಸಿದರು.

ದಾವಣಗೆರೆ ದುಗ್ಗಮ್ಮ ಜಾತ್ರೆ; ಪ್ರಾಣಿಬಲಿ, ಮದ್ಯ ಮಾರಾಟ, ಗ್ಯಾಸ್ ಬಲೂನ್, ಅರೆಬೆತ್ತಲೆ ಸೇವೆ ನಿಷೇಧ; ಜಿಲ್ಲಾಧಿಕಾರಿ ಆದೇಶ

ಯುವ ರೈತರಿಗೆ ಹೆಣ್ಣು ಕೊಡುವಂತಾಗಬೇಕು

ತುಂಗಭದ್ರ ನದಿಯಿಂದ ಏತ ನೀರಾವರಿ ಮೂಲಕ ಜಿಲ್ಲೆಯ ವಿವಿಧ ತಾಲ್ಲೂಕುಗಳ 100ಕ್ಕೂ ಹೆಚ್ಚು ಕೆರೆಗಳಿಗೆ ನೀರು ಹರಿಸಲಾಗುತ್ತಿದೆ. ಇದರಿಂದ ರೈತರಲ್ಲಿ ಸಂತಸ ಮೂಡಿದೆ. ಸರ್ಕಾರಿ ನೌಕರರಿಗಿಂತ ಹೆಚ್ಚಿನ ಸೌಲಭ್ಯಗಳು ರೈತರಿಗೆ ಸಿಗಬೇಕು. 5 ಎಕರೆ ಜಮೀನಿರುವ ಯುವ ರೈತ ಮದುವೆಯಾಗಲು ಹೆಣ್ಣು ಸುಲಭವಾಗಿ ಸಿಗುವಂತಾಗಬೇಕು‌ ಎಂದರು.

ಬೆಳೆ ಪರಿಹಾರ ಪ್ರಕ್ರಿಯೆ ಸರಳೀಕರಿಸಿ

ಬೆಳೆ ನಷ್ಟವಾದ ಸಂದರ್ಭದಲ್ಲಿ 10 ಸಾವಿರ ಪರಿಹಾರ ಪಡೆಯಲು ರೈತರು ಅರ್ಜಿ ಹಾಕಲು 5 ಸಾವಿರ ಖರ್ಚು ಮಾಡಬೇಕಿದೆ. ಇದರಿಂದ ಬೇಸತ್ತುಬಹೋಗಿದ್ದು,ಬೆಳೆ ಪರಿಹಾರ ಪಡೆಯುವ ಪ್ರಕ್ರಿಯೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರಳೀಕರಿಸಬೇಕು ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *