ದಾವಣಗೆರೆ: ಲಾರಿ ಡಿಕ್ಕಿ ಹೊಡೆದು ಪಾದಚಾರಿ ಸಾವಿಗೆ ಕಾರಣವಾಗಿದ್ದ ಚಾಲಕ 32 ವರ್ಷ ನಂತರ‌‌ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಲಾರಿ ಡಿಕ್ಕಿ ಹೊಡೆಸಿ ಪಾದಚಾರಿ ಸಾವಿಗೆ ಕಾರಣವಾಗಿದ್ದ ಚಾಲಕನನ್ನು 32 ವರ್ಷ ನಂತರ ಜಗಳೂರು ಪೊಲೀಸರು ಬಂಧಿಸಿದ್ದಾರೆ.

ತರಳಬಾಳು ಹುಣ್ಣಿಮೆ ನೇರ ಪ್ರಸಾರ

 

ಹಾಸನ ಜಿಲ್ಲೆಯ ಅರಸಿಕೆರೆಯ ಗಂಗಾಧರಪ್ಪ (67) ಬಂಧಿತ ಆರೋಪಿ.1994ರಲ್ಲಿ ಜಿಲ್ಲೆಯ ಜಗಳೂರು ತಾಲ್ಲೂಕಿನ ಕಲ್ಲೇದೇವರಪುರ ಗ್ರಾಮದ ಬಳಿ ಹಳೆಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಚಾಲಕ ಲಾರಿ ಹರಿಸಿ ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆ ನಂತರ ಆರೋಪಿ ತಲೆಮರೆಸಿಕೊಂಡಿದ್ದನು.

ಜಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರಿಗೆ 32 ವರ್ಷದಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಸಿಪಿಐ ಸಿದ್ರಾಮಯ್ಯ ಮಾರ್ಗದರ್ಶನದಲ್ಲಿ ಎಎಸ್‌ಐ ವೆಂಕಟೇಶ್ ಜಿ.ಟಿ. ಅವರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗಳೂರಿನ ನ್ಯಾಯಾಲಯಕ್ಕೆ ಹಾಜರಪಡಿಸಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *